ಇಂದೋರ್: ಅಪ್ರಾಪ್ತ ವಯಸ್ಸಿನ ಅತ್ಯಾಚಾರ ಸಂತ್ರಸ್ತೆಯೊಬ್ಬಳು ತೀವ್ರ ಬಡತನದಿಂದಾಗಿ ಮಗುವನ್ನು ಸಾಕಲು ಸಾಧ್ಯವಾಗದೇ ಎರಡು ತಿಂಗಳ ಮಗುವನ್ನು ಕತ್ತು ಹಿಸುಕಿ ಕೊಂದ ಧಾರುಣ ಘಟನೆ ವರದಿಯಾಗಿದೆ.
ಈ ಸಂಬಂಧ ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿ ತಪ್ಪೊಪ್ಪಿಕೊಂಡಿದ್ದಾಗಿ ಇಂದೋರ್ ಹೆಚ್ಚುವರಿ ಡಿಸಿಪಿ ರಾಜೇಶ್ ವ್ಯಾಸ್ ಹೇಳಿದ್ದಾರೆ.
“ಕೆಲ ತಿಂಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು. ಆಕೆ ಮಗುವಿಗೆ ಜನ್ಮ ನೀಡಿದಳು. ಕುಟುಂಬದವರು ಆಕೆಯನ್ನು ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದರು. ತೀವ್ರ ಹತಾಶೆಯಿಂದ ಆಕೆ ಎರಡು ತಿಂಗಳ ಮಗುವನ್ನು ಕತ್ತು ಹಿಸುಕಿ ಸಾಯಿಸಿದ್ದು, ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ” ಎಂದು ಅವರು ವಿವರ ನೀಡಿದರು.
ಮಗುವಿನ ಮರಣೋತ್ತರ ಪರೀಕ್ಷೆಯಿಂದ ಈ ಘಟನೆ ಬೆಳಕಿಗೆ ಬಂದಿದೆ.