News Karnataka Kannada
Friday, May 03 2024
ಮಧ್ಯ ಪ್ರದೇಶ

ಇಂದೋರ್: 4 ಬಾರಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದ ಮಹಿಳೆಗೆ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ಈವರೆಗೆ 199 ಜನರಲ್ಲಿ ಜೆಎನ್.1 ದೃಢ ಪಟ್ಟಿದೆ. ಜಿನೋಮಿಕ್ ಸ್ವೀಕೆನ್ಸ್ ವರದಿಯಲ್ಲಿ 199 ಮಂದಿಗೆ ಜೆಎನ್.1 ಸೋಂಕು ತಗುಲಿರೋದು ದೃಢಪಟ್ಟಿದೆ. ಈವರೆಗೆ ಜಿನೋಮ್‌ ಸೀಕ್ವೆನ್ಸ್‌ ಟೆಸ್ಟ್‌ಗೆ 601 ಸ್ಯಾಂಪಲ್ಸ್‌ಗಳ‌ ರವಾನಿಸಲಾಗಿತ್ತು. ಡಿಸೆಂಬರ್ 25ರಂದು ಹೊರ ಬಿದ್ದ ಮೊದಲ ರಿಪೋರ್ಟ್ ನಲ್ಲಿ 60 ಸ್ಯಾಂಪಲ್ ಗಳ ಪೈಕಿ 34 ಮಂದಿಗೆ ಜೆಎನ್ 1 ತಗುಲಿರೋದು ಪತ್ತೆಯಾಗಿದೆ.
Photo Credit :

ಇಂದೋರ್: ವಿಶ್ವಾದ್ಯಂತ ಕೊರೊನಾ ಜೊತೆಗೆ ರೂಪಾಂತರಿ ಸೋಂಕು ಕೂಡ ಹೆಚ್ಚಾಗುತ್ತಿರುವುದರಿಂದ ಕೊವಿಡ್ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಲಸಿಕಾ ಅಭಿಯಾನ ಭರದಿಂದ ಸಾಗುತ್ತಿದೆ. ಭಾರತದಲ್ಲಿ ಬಹುಪಾಲು ಜನರಿಗೆ ಈಗಾಗಲೇ ಎರಡು ಡೋಸ್ ಕೊವಿಡ್ ಲಸಿಕೆ ವಿತರಿಸಲಾಗಿದೆ. ಈಗಾಗಲೇ ಲಸಿಕೆ ಹಾಕಿಸಿಕೊಂಡವರಿಗೂ ಮತ್ತೆ ಕೊರೊನಾ ಪಾಸಿಟಿವ್ ದೃಢಪಡುತ್ತಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ. ಲಸಿಕೆ ಹಾಕಿಸಿಕೊಂಡವರಿಗೂ ಕೊರೊನಾ ಸೋಂಕು ತಗುಲುತ್ತಿರುವುದರಿಂದ ಈಗಾಗಲೇ ಕೆಲವು ರಾಜ್ಯಗಳಲ್ಲಿ ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಲಾಗುತ್ತಿದೆ. ಇದೀಗ ನಾಲ್ಕು ಬಾರಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದ ಮಹಿಳೆಯೊಬ್ಬರಿಗೆ ಇಂದೋರ್ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ದುಬೈಗೆ ತೆರಳುವ ವಿಮಾನ ಹತ್ತದಂತೆ ತಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

44 ವರ್ಷದ ದುಬೈ ನಿವಾಸಿ ಕೊವಿಡ್-19 ಎರಡು ಬೇರೆ ಬೇರೆ ಲಸಿಕೆಗಳ ನಾಲ್ಕು ಡೋಸ್ ತೆಗೆದುಕೊಂಡಿದ್ದರು. ಮಹಿಳೆ 12 ದಿನಗಳ ಹಿಂದೆ ಮಧ್ಯಪ್ರದೇಶದ ಇಂದೋರ್ ಬಳಿಯ ಮೊವ್ ಪಟ್ಟಣಕ್ಕೆ ಹತ್ತಿರದ ಸಂಬಂಧಿಯೊಬ್ಬರ ಮದುವೆಗೆ ದುಬೈನಿಂದ ಆಗಮಿಸಿದ್ದರು. ವಿವಿಧ ದೇಶಗಳಲ್ಲಿ ಈಗಾಗಲೇ ನಾಲ್ಕು ಬಾರಿ ಲಸಿಕೆಯನ್ನು ಪಡೆದ ಸುಮಾರು 44 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ಅವರಿಗೆ COVID-19 ಸೋಂಕು ತಗುಲಿರುವುದು ದೃಢಪಟ್ಟಿತು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆಕೆಗೆ ಯಾವುದೇ ರೋಗ ಲಕ್ಷಣಗಳಿರಲಿಲ್ಲ. ವಿಚಿತ್ರವೆಂದರೆ ವಿಮಾನ ಹತ್ತುವ ಒಂದು ದಿನದ ಮೊದಲು ಆಕೆ ಕೊವಿಡ್ ಟೆಸ್ಟ್​ ಮಾಡಿಸಿಕೊಂಡಿದ್ದಳು. ಅದರ ವರದಿಯಲ್ಲಿ ಆಕೆಗೆ ಕೊರೊನಾ ನೆಗೆಟಿವ್ ಎಂದು ದಾಖಲಾಗಿತ್ತು.

ಜನವರಿ ಮತ್ತು ಆಗಸ್ಟ್ ನಡುವೆ ಮಹಿಳೆ 4 ಡೋಸ್ ಸಿನೋಫಾರ್ಮ್ ಮತ್ತು ಫೈಜರ್‌ ಲಸಿಕೆಗಳನ್ನು ಪಡೆದಿದ್ದರು. ಸದ್ಯಕ್ಕೆ ಮಹಿಳೆ ಕೊವಿಡ್ ರೋಗದ ಲಕ್ಷಣರಹಿತಳಾಗಿದ್ದಾರೆ. ಆದರೆ, ನಾಲ್ಕು ದಿನಗಳ ಹಿಂದೆ ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಬಗ್ಗೆ ವಿಮಾನ ನಿಲ್ದಾಣದ ಆರೋಗ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಯಿತು. ಆ ವರದಿಯಲ್ಲಿ ಕೊವಿಡ್ ಪಾಸಿಟಿವ್ ಬಂದಿದ್ದರಿಂದ ಆಕೆಯನ್ನು ವಿಮಾನ ಹತ್ತದಂತೆ ತಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು