News Karnataka Kannada
Sunday, May 05 2024
ಮಧ್ಯ ಪ್ರದೇಶ

ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು

Accident.
Photo Credit :

ಅಲಿರಾಜ್​ಪುರ: ಬಸ್​ವೊಂದು ನದಿಗೆ ಬಿದ್ದು ಒಂದು ವರ್ಷದ ಮಗು ಸೇರಿ ಮೂರು ಮಂದಿ ಮೃತಪಟ್ಟು, 28 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದ ಅಲಿರಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಇಂದು ಮುಂಜಾನೆ 6ಗಂಟೆ ಹೊತ್ತಿಗೆ ಅಲಿರಾಜ್​ಪುರದ ಚಾಂದ್​ಪುರ ಗ್ರಾಮದ ಬಳಿ ಬಸ್​ ನದಿಗೆ ಬಿದ್ದಿದೆ. ಅಂದಹಾಗೆ, ಈ ಬಸ್​ ಅಲಿರಾಜ್​ಪುರದಿಂದ ಗುಜರಾತ್​​ನ ಉದೇಪುರಕ್ಕೆ ಹೋಗುತ್ತಿತ್ತು ಎಂಬುದಾಗಿ ಪೊಲೀಸ್​ ಅಧಿಕಾರಿ ಮನೋಜ್​ ಕುಮಾರ್ ತಿಳಿಸಿದ್ದಾರೆ.

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ. ಮೃತರನ್ನು ಕೈಲಾಶ್​ ಮೇದಾ (48), ಮೀರಾಬಾಯಿ (46) ಎಂದು ಗುರುತಿಸಲಾಗಿದೆ.

ಮೃತಪಟ್ಟ ಒಂದು ವರ್ಷದ ಮಗುವಿನ ಹೆಸರು ಗೊತ್ತಾಗಿಲ್ಲ. ಇನ್ನು 28 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮೂರೂ ಮಂದಿ ಗುಜರಾತ್​​ನವರೇ ಆಗಿದ್ದಾರೆ. ಜಿಲ್ಲಾಧಿಕಾರಿ ಮನೋಜ್​ ಪುಷ್ಪ್​ ಅವರು ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಗೇ, ಇದೇ ವರ್ಷ ಫೆಬ್ರವರಿಯಲ್ಲಿ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್​ವೊಂದು ಸೇತುವೆಯ ಕೆಳಗೆ ಬಿದ್ದು 51 ಮಂದಿ ಮೃತಪಟ್ಟಿದ್ದರು. ಮುಂಜಾನೆ 7.30ರ ಹೊತ್ತಿಗೆ ಘಟನೆ ನಡೆದಿತ್ತು.  ಸೆಪ್ಟೆಂಬರ್​ನಲ್ಲಿ ಮೇಘಾಲಯದಲ್ಲಿ ಇಂಥದ್ದೇ ಒಂದು ದುರ್ಘಟನೆ ನಡೆದಿತ್ತು. ತುರಾದಿಂದ ಶಿಲ್ಲಾಂಘ್​ಗೆ ತೆರಳುತ್ತಿದ್ದ ಬಸ್​ ರಂಗ್ಡಿ ನದಿಗೆ ಬಿದ್ದು, ಚಾಲಕ ಸೇರಿ ಆರು ಮಂದಿ ಮೃತಪಟ್ಟಿದ್ದರು.

2020ರ ಫೆಬ್ರವರಿಯಲ್ಲಿ ಜೈಪುರದಲ್ಲಿ. ಮುದವೆ ಮುಗಿಸಿ ವಾಪಸ್​ ಬರುತ್ತಿದ್ದ ಖಾಸಗಿ ಬಸ್​ವೊಂದು ಬುಂಡಿ ಜಿಲ್ಲೆಯ      ಕೋಟಾ-ದೌಸಾ ಹೆದ್ದಾರಿಯಲ್ಲಿ ಮೇಜ್​ ನದಿಗೆ ಬಿದ್ದಿತ್ತು. ಈ ದುರಂತದಲ್ಲಿ  25ಮಂದಿ ಮೃತಪಟ್ಟಿದ್ದರು.ಈ ಬಸ್​ನಲ್ಲಿ ಅತ್ಯಂತ ಹೆಚ್ಚಿನ ಜನರು ತುಂಬಿ ಹೋಗಿದ್ದರು. ಚಾಲಕನಿಗೆ ನಿಯಂತ್ರಣ ಮಾಡಲಾಗದೆ ಅವಘಡ ಸಂಭವಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು