News Karnataka Kannada
Monday, May 06 2024
ಮಧ್ಯ ಪ್ರದೇಶ

ಪೋಷಕರು ಮದುವೆಗೆ ಕರೆದುಕೊಂಡು ಹೋಗಿಲ್ಲವೆಂದು ಮನನೊಂದು ಬಾಲಕ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : IANS

ಮಧ್ಯಪ್ರದೇಶ : ಕ್ಷುಲ್ಲಕ ಕಾರಣಕ್ಕೆ ಬೇಸರಗೊಂಡ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಎಂಪಿಯ ರಾಜಧಾನಿ ಭೋಪಾಲ್‌ನ ಗೋವಿಂದಪುರ ನಿವಾಸದಲ್ಲಿ ಬಾಲಕ ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ‌.

6 ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಅನ್ನು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಆತನ ಪೋಷಕರು, ಆರ್ಯನ್ ಒಬ್ಬನನ್ನೇ ಮನೆಯಲ್ಲಿ ಬಿಟ್ಟು ಮದುವೆಗೆ ಹೋಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ, ಆರ್ಯನ್ ಪೋಷಕರು ಅವನನ್ನು ಮನೆಯಲ್ಲಿಯೇ ಬಿಟ್ಟು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗಿದ್ದರು. ಆರ್ಯನ್ ಗೆ ಆತನ ಹಿರಿಯ ಸಹೋದರ ಮನೆಗೆ ಬಂದ ಮೇಲೆ ಇಬ್ಬರು ಮದುವೆ ಪಾರ್ಟಿಗೆ ಬರುವಂತೆ ತಿಳಿಸಿದ್ದರು. ಆದರೆ ಆರ್ಯನ್ ಅವರ ಅಣ್ಣ ಸ್ಥಳೀಯ ಕ್ಲಬ್‌ನಿಂದ ಮನೆಗೆ ಬರಲು ಸ್ವಲ್ಪ ತಡವಾಯಿತು, ಇದರಿಂದ ದೊಡ್ಡ ಅನಾಹುತವೇ ನಡೆದು ಹೋಗಿದೆ.

ಆರ್ಯನ್ ಹಿರಿಯ ಸಹೋದರ ಮನೆಗೆ ಬಂದಾಗ, ಆತ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.‌ ಆರ್ಯನ್ ನನ್ನು ಆ ಸ್ಥಿತಿಯಲ್ಲಿ ಕಂಡ ಅಣ್ಣ ಜೋರಾಗಿ‌ ಕಿರುಚಿಕೊಂಡಿದ್ದಾನೆ.‌ ಅವನ ಕೂಗು ಕೇಳಿ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿ ಪೊಲೀಸರು ಮತ್ತು ಪೋಷಕರಿಗೆ ಕರೆ ಮಾಡಿದ್ದಾರೆ.‌

ವಿಷಯ ತಿಳಿಯುತ್ತಿದ್ದಂತೆ, ಪೋಷಕರು ಮನೆಗೆ ಧಾವಿಸಿದ್ದಾರೆ. ಹುಡುಗನನ್ನು ಬದುಕಿಸುವ ಆಸೆಯೊಂದಿಗೆ ಮೂರು ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದಿದ್ದಾರೆ. ಆದರೆ, ಮೂರೂ ಆಸ್ಪತ್ರೆಗಳ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತ ಆರ್ಯನ್ ಹಠಮಾರಿಯಾಗಿದ್ದ ಎಂದು ಆತನ ಪೋಷಕರು, ಸಂಬಂಧಿಕರು ತಿಳಿಸಿದ್ದಾರೆ. ಅವನನ್ನು ಆತನ ಪೋಷಕರೆ ಪಾರ್ಟಿಗೆ ಕರೆದುಕೊಂಡು ಹೋಗಲಿಲ್ಲ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೇ ಈ ರೀತಿಯಾಗಿ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು