ಮಧ್ಯಪ್ರದೇಶ : ಕ್ಷುಲ್ಲಕ ಕಾರಣಕ್ಕೆ ಬೇಸರಗೊಂಡ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಎಂಪಿಯ ರಾಜಧಾನಿ ಭೋಪಾಲ್ನ ಗೋವಿಂದಪುರ ನಿವಾಸದಲ್ಲಿ ಬಾಲಕ ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
6 ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಅನ್ನು ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಆತನ ಪೋಷಕರು, ಆರ್ಯನ್ ಒಬ್ಬನನ್ನೇ ಮನೆಯಲ್ಲಿ ಬಿಟ್ಟು ಮದುವೆಗೆ ಹೋಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ, ಆರ್ಯನ್ ಪೋಷಕರು ಅವನನ್ನು ಮನೆಯಲ್ಲಿಯೇ ಬಿಟ್ಟು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗಿದ್ದರು. ಆರ್ಯನ್ ಗೆ ಆತನ ಹಿರಿಯ ಸಹೋದರ ಮನೆಗೆ ಬಂದ ಮೇಲೆ ಇಬ್ಬರು ಮದುವೆ ಪಾರ್ಟಿಗೆ ಬರುವಂತೆ ತಿಳಿಸಿದ್ದರು. ಆದರೆ ಆರ್ಯನ್ ಅವರ ಅಣ್ಣ ಸ್ಥಳೀಯ ಕ್ಲಬ್ನಿಂದ ಮನೆಗೆ ಬರಲು ಸ್ವಲ್ಪ ತಡವಾಯಿತು, ಇದರಿಂದ ದೊಡ್ಡ ಅನಾಹುತವೇ ನಡೆದು ಹೋಗಿದೆ.
ಆರ್ಯನ್ ಹಿರಿಯ ಸಹೋದರ ಮನೆಗೆ ಬಂದಾಗ, ಆತ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಆರ್ಯನ್ ನನ್ನು ಆ ಸ್ಥಿತಿಯಲ್ಲಿ ಕಂಡ ಅಣ್ಣ ಜೋರಾಗಿ ಕಿರುಚಿಕೊಂಡಿದ್ದಾನೆ. ಅವನ ಕೂಗು ಕೇಳಿ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿ ಪೊಲೀಸರು ಮತ್ತು ಪೋಷಕರಿಗೆ ಕರೆ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ, ಪೋಷಕರು ಮನೆಗೆ ಧಾವಿಸಿದ್ದಾರೆ. ಹುಡುಗನನ್ನು ಬದುಕಿಸುವ ಆಸೆಯೊಂದಿಗೆ ಮೂರು ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದಿದ್ದಾರೆ. ಆದರೆ, ಮೂರೂ ಆಸ್ಪತ್ರೆಗಳ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತ ಆರ್ಯನ್ ಹಠಮಾರಿಯಾಗಿದ್ದ ಎಂದು ಆತನ ಪೋಷಕರು, ಸಂಬಂಧಿಕರು ತಿಳಿಸಿದ್ದಾರೆ. ಅವನನ್ನು ಆತನ ಪೋಷಕರೆ ಪಾರ್ಟಿಗೆ ಕರೆದುಕೊಂಡು ಹೋಗಲಿಲ್ಲ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೇ ಈ ರೀತಿಯಾಗಿ ಮಾಡಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ.
ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…
ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…