News Karnataka Kannada
Saturday, May 04 2024
ಮಧ್ಯ ಪ್ರದೇಶ

ಭಗ್ನ ಪ್ರೇಮಿಯೊಬ್ಬ ನ ಸಿಟ್ಟಿಗೆ 7 ಜನ ಸಜೀವ ದಹನ

Untitled 182
Photo Credit :

ಮಧ್ಯಪ್ರದೇಶ :  ಇಂದೋರ್ ನ ವಿಜಯ್ ನಗರ ಪ್ರದೇಶದ ಶನಿವಾರ ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತ ಏಳು ಜನರನ್ನು ಬಲಿಪಡೆದಿತ್ತು. ಆಕಸ್ಮಿಕ ಅಗ್ನಿ ಅವಘಡ ಎಂದು ಹೇಳಲಾದ ಪ್ರಕರಣ ಈಗ ಬೇರೆಯದ್ದೇ ತಿರುವು ಪಡೆದಿದೆ.

ಈ ಭೀಕರ ಅಗ್ನಿ ದುರಂತದ ಹಿಂದೆ ಪ್ರೇಮ ವೈಫಲ್ಯದ ಕಿಚ್ಚು ಅಡಗಿರುವುದು ಬೆಳಕಿಗೆ ಬಂದಿದೆ. ಪ್ರೇಮ ನಿರಾಕರಣೆಯಿಂದ ನೊಂದ ಭಗ್ನಪ್ರೇಮಿಯೊಬ್ಬ ಪ್ರಿಯತಮೆಯ ವಾಹನಕ್ಕೆ ಹಚ್ಚಿದ ಬೆಂಕಿ, ಇಡೀ ವಸತಿ ಸಮುಚ್ಛಯಕ್ಕೆ ಹಬ್ಬಿ 7 ಜನರನ್ನು ಬಲಿಪಡೆದುಕೊಂಡಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 3 ಮಹಡಿ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತ್ತು. ನಿದ್ದೆಯ ಮಂಪರಿನಲ್ಲಿದ್ದ ಜನರಿಗೆ ಅರಿವಾಗುವುದರ ಒಳಗೆ ಇಡೀ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿತ್ತು.
ಕಟ್ಟಡದಲ್ಲಿ ವಿನಾಶಕಾರಿ ಬೆಂಕಿ ಉಂಟುಮಾಡಿ 7 ಜೀವಗಳ ಸಾವಿಗೆ ಕಾರಣವಾದ ಆರೋಪದ ಮೇಲೆ ಶನಿವಾರ ತಡರಾತ್ರಿ 27 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶುಭಂ ದೀಕ್ಷಿತ್(27) ತನ್ನನ್ನು ತಿರಸ್ಕರಿಸಿದ ಮಹಿಳೆಗೆ ಸೇರಿದ ವಾಹನವನ್ನು ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ದೀಕ್ಷಿತ್‌ಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತನಿಖೆಗೆ ಆದೇಶಿಸಿದ್ದಾರೆ ಮತ್ತು ಮೃತರ ಮುಂದಿನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು