News Karnataka Kannada
Saturday, May 04 2024
ಮಧ್ಯ ಪ್ರದೇಶ

ಮಧ್ಯಪ್ರದೇಶದಲ್ಲಿ ಭೂಗತ ಸುರಂಗ ಕುಸಿತ: 7 ಮಂದಿ ರಕ್ಷಣೆ

Breaking News
Photo Credit :

ಭೋಪಾಲ್:ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ತಡರಾತ್ರಿ ಕಟ್ನಿ ಜಿಲ್ಲೆಯಲ್ಲಿ ನರ್ಮದಾ ಕಣಿವೆ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಭೂಗತ ಸುರಂಗ ಕುಸಿದಿದ್ದು, ಹಲವು ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.ಪರಿಹಾರ ಮತ್ತು ರಕ್ಷಣಾ ಕಾರ್ಯ ಆರಂಭಿಸಲಾಗಿದೆ.ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು,ಕೂಲಿ ಕಾರ್ಮಿಕರು ಆಳದಲ್ಲಿ ಸಿಲುಕಿರುವುದರಿಂದ ಸಮಯ ಹಿಡಿಯುತ್ತಿದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ದುರಂತದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ನಿರ್ಮಾಣ ಹಂತದಲ್ಲಿದ್ದ ಅಂಡರ್ ಗೌಂಡ್ ಟನಲ್ ಕುಸಿದು 9 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 7 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು, ಇನ್ನಿಬ್ಬರಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯು ಕಟ್ನಿ ಜಿಲ್ಲೆಯ ಸ್ಲಿಮ್ನಾಬಾದ್‌ನಲ್ಲಿ ನಡೆದಿದ್ದು, ನರ್ಮದಾ ವ್ಯಾಲಿ ಯೋಜನೆಯಡಿ ನದಿಯ ಬಲದಂಡೆಯಲ್ಲಿ ಸುರಂಗ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ನರ್ಮದಾ ನದಿಯ ಬಾರ್ಗಿ ಅಣೆಕಟ್ಟಿನಿಂದ ಬನ್‌ಸಾಗರದವರೆಗೆ ಭೂಗತ ಸುರಂಗ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದಿದ್ದು, ಕೆಳಗಡೆ ಕೆಲಸ ಮಾಡುತ್ತಿದ್ದ 9 ಕಾರ್ಮಿಕರು ಸಿಲುಕಿದ್ದರು.

ರಾತ್ರಿ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಸ್ಲೀಮನಾಬಾದ್‌ನಲ್ಲಿ ನಡೆದ ಘಟನೆಯ ಕುರಿತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ಪಡೆದುಕೊಂಡಿದ್ದಾರೆ. ಕಟ್ನಿಯ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಘಟನೆಯ ಕುರಿತು ವಿಚಾರಿಸಿದರು. ಅಪಘಾತದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು