ಭೋಪಾಲ್: ಆಹಾರ ವಿತರಣಾ ಕಂಪನಿ ಝೊಮಾಟೊದ 10 ನಿಮಿಷಗಳಲ್ಲಿ ಮನೆ ಬಾಗಿಲಿಗೆ ಆಹಾರವನ್ನು ತಲುಪಿಸುವ ಭರವಸೆ ನೀಡಿದೆ.
ಆದರೆ ಇದು ರಸ್ತೆಗಳಲ್ಲಿ ವಿತರಣಾ ವ್ಯಕ್ತಿಗಳು ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡುವಂತಿದೆ ಎಂದಿರುವ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ಈ ತ್ವರಿತ ವಿತರಣಾ ಯೋಜನೆಯನ್ನು ಬದಲಾಯಿಸುವಂತೆ ಕಂಪನಿಗೆ ಸೂಚಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಲು ಜೊಮಾಟೊಗೆ ಅವಕಾಶ ನೀಡುವುದಿಲ್ಲ ಮತ್ತು ತ್ವರಿತ ವಿತರಣೆ ಪ್ರಕ್ರಿಯೆಯಲ್ಲಿ ಸಂಭವಿಸುವ ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಪಘಾತಗಳಿಗೆ ಕಂಪನಿಯೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
“10 ನಿಮಿಷಗಳಲ್ಲಿ ಆಹಾರವನ್ನು ತಲುಪಿಸುವ ಝೊಮಾಟೊ ಯೋಜನೆಯು ತನ್ನ ಉದ್ಯೋಗಿಗಳ(ವಿತರಣಾ ಪಾಲುದಾರರು) ಮತ್ತು ಇತರ ಜನರ ಜೀವನದ ಜೊತೆ ಆಟವಾಡುವಂತಿದೆ. ಝೊಮಾಟೊ ಬಿಡಿ, ಮಧ್ಯಪ್ರದೇಶದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ನಾನು ಈ ಯೋಜನೆಗಳನ್ನು ಬದಲಾಯಿಸಲು ಝೊಮಾಟೊಗೆ ಸಲಹೆ ನೀಡುತ್ತಿದ್ದೇನೆ” ಎಂದು ಮಿಶ್ರಾ ಹೇಳಿದ್ದಾರೆ.
ಆಹಾರ ವಿತರಣಾ ವ್ಯಕ್ತಿಗಳು 10 ನಿಮಿಷಗಳಲ್ಲಿ ಡೆಲಿವರಿ ಮಾಡುವುದಕ್ಕಾಗಿ “ಅತುರದಿಂದ ಮತ್ತು ಅಪಾಯಕಾರಿಯಾಗಿ ಚಾಲನೆ ಮಾಡುವ ಮೂಲಕ” ತಲುಪಬಹುದು ಎಂದು ಅವರು ಹೇಳಿದ್ದಾರೆ.
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…