ಭೂಪಾಲ್: ನರ್ಮದಾ ನದಿಗೆ ಮಹಾರಾಷ್ಟ್ರದ ಸರ್ಕಾರಿ ರಸ್ತೆ ಸಾರಿಗೆ ನಿಗಮದ ಬಸ್ ಉರುಳಿಬಿದ್ದ ಪರಿಣಾಮ 12 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನಡೆದಿದೆ. ಬಸ್ಸಿನಲ್ಲಿ ಸಿಲುಕಿದ್ದ 15 ಮಂದಿಯನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ.
ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನರ್ಮದಾ ನದಿಯ ಸೇತುವೆ ಮೇಲೆ ಬಸ್ ಸಂಚರಿಸುತ್ತಿದ್ದಾಗ ನದಿಗೆ ಉರುಳಿತು. ಧಮ್ನೊದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾದರು.
ಇಂದೋರ್ ಮತ್ತು ಧರ್ ನಗರಗಳಿಂದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರು ಎಂದು ಹೇಳಲಾಗುತ್ತಿದೆ. ನಿಖರ ವಿವರಗಳು ಲಭ್ಯವಾಗಿಲ್ಲ.
ಪರಿಹಾರ ಕಾರ್ಯಾಚರಣೆಗಾಗಿ ಜಿಲ್ಲಾಡಳಿತದ ತಂಡವೊಂದು ಸ್ಥಳಕ್ಕೆ ಧಾವಿಸಿದೆ. ಬಸ್ಸನ್ನು ಈಗಾಗಲೇ ಮೇಲೆತ್ತಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.
12 dead as Maharashtra Roadways bus falls off bridge in MP’s Dhar
Read @ANI Story | https://t.co/9hkqKmmqhV#MaharashtraRoadwaysBus #MadhyaPradesh #Dhar #accident pic.twitter.com/FAAPPjkS0P
— ANI Digital (@ani_digital) July 18, 2022