ಮುಸ್ಲಿಂ ಯುವತಿ ಜತೆ ಊಟ ಮಾಡಲು ಹೋಟೆಲ್‌ಗೆ ಹೋಗಿದ್ದ ಹಿಂದು ಯುವಕನ ಮೇಲೆ ಮುಸ್ಲಿಮರ ಗುಂಪು ಹಲ್ಲೆ

ಇಂದೋರ್‌ : ಮುಸ್ಲಿಂ ಯುವತಿ ಜತೆ ಊಟ ಮಾಡಲು ಹೋಟೆಲ್‌ಗೆ ಹೋಗಿದ್ದ ಹಿಂದು ಯುವಕನ ಮೇಲೆ ಮುಸ್ಲಿಮರ ಗುಂಪೊಂದು ಹಲ್ಲೆ ಮಾಡಿದ್ದು, ಅವರನ್ನು ರಕ್ಷಿಲು ಬಂದ ಇಬ್ಬರನ್ನು ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದ ಬಳಿಕ ಮುಸ್ಲಿಮರಿಂದ ಹೊಸ ವರಾತ ಶುರುವಾಗಿದೆ ಎಂದು ಹಲವು ಮಂದಿ ಸೋಷಿಯಲ್‌ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ. ಮುಸ್ಲಿಮರು ಹಿಂದು ಯುವಕನಿಗೆ ಥಳಿಸಿದ ವೀಡಿಯೊ ವೈರಲ್‌ ಆಗಿದೆ. ಗುಂಪಿನಲ್ಲಿ 20ರಷ್ಟು ಮಂದಿ ಇದ್ದರು. ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಯುವಕ ಮತ್ತು ಯುವತಿ ಊಟ ಮಾಡಿ ಹೋಟೆಲಿಂದ ಹೊರ ಬರುತ್ತಿದ್ದಂತೆ ಮುಸ್ಲಿಮರ ಗುಂಪು ಅವರನ್ನು ಬೆನ್ನಟ್ಟಿಕೊಂಡು ಹೋಗಿ ಅಡ್ಡಗಟ್ಟಿ ಹಿಂದು ಯುವಕನ ಜತೆ ಯಾಕೆ ಹೋದದ್ದು ಎಂದು ಯುವತಿಯನ್ನು ಗದರಿಸಿದೆ. ಮನೆಯಲ್ಲೇ ಹೇಳಿಯೇ ಬಂದಿದ್ದೇನೆ ಎಂದು ಯುವತಿ ತಿಳಿಸಿದ ಯುವತಿ ಹಲ್ಲೆ ಮಾಡಲು ಮುಂದಾದ ಗುಂಪಿಗೆ ಪ್ರತಿರೋಧ ತೋರಿಸಿದ್ದಾಳೆ. ಈ ನಡುವೆ ಇಬ್ಬರು ವ್ಯಕ್ತಿಗಳು ಗುಂಪಿನಿಂದ ಇವರಿಬ್ಬರನ್ನು ರಕ್ಷಿಸಲು ಮುಂದೆ ಬಂದಿದ್ದಾರೆ. ಆಗ ಗುಂಪಿನಲ್ಲಿದ್ದವರು ಯುವಕನನ್ನು ಥಳಿಸಿ ರಕ್ಷಿಸಲು ಬಂದವರಿಗೆ ಇರಿದಿದ್ದಾರೆ. ಗುಂಪಿನಲ್ಲಿದ್ದವರೆಲ್ಲ 23-26 ವರ್ಷ ವಯಸ್ಸಿನ ಯುವಕರು. ಇಬ್ಬರನ್ನು ಬಂಧಿಸಿದ್ದು, ಉಳಿದವರನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Umesha HS

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

3 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

4 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

4 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

5 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

5 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

6 hours ago