ಮಧ್ಯಪ್ರದೇಶ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಭಸ್ಮ ಆರತಿ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಮತ್ತು ₹1 ಲಕ್ಷ ನೆರವನ್ನು ನೀಡಲಾಗುವುದು. ಅಲ್ಲದೆ ಈ ರೀತಿಯ ಘಟನೆ ಮರುಕಳಿಸದಂತೆ ಆಡಳಿತವು ಮುನ್ನೆಚ್ಚರಿಕೆವಹಿಸಲಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
ಭೋಪಾಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಳಿ ಬಣ್ಣಗಳಿಂದ ರಕ್ಷಿಸಲು ಗರ್ಭಗುಡಿಯ ಬೆಳ್ಳಿಯ ಗೋಡೆಗಳ ಮೇಲೆ ಬಟ್ಟೆಗಳನ್ನು ಹಾಕಲಾಗಿತ್ತು. ‘ಗುಲಾಲ್’ ಆರತಿ ತಟ್ಟೆಯ ಮೇಲೆ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆಯೇ ಅಥವಾ ಗುಲಾಲ್ನಲ್ಲಿನ ರಾಸಾಯನಿಕಗಳ ಪ್ರತಿಕ್ರಿಯೆಯಿಂದ ಬೆಂಕಿ ಕಾಣಿಸಿಕೊಂಡಿದೆಯೇ ಎನ್ನುವುದು ಸ್ಪಷ್ಟವಾಗಿ ತಿಳಿದುಬಂದಿಲ್ಲ.
ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸುವುದು ಆದ್ಯತೆಯ ಕೆಲಸವಾಗಿದೆ. ದೇವಾಲಯದೊಳಗಿನ ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಪರೀಕ್ಷಿಸಲು ಆದೇಶಿಸಲಾಗಿದೆ ಎಂದು ಹೇಳಿದರು.