News Karnataka Kannada
Sunday, May 19 2024
ಮಧ್ಯ ಪ್ರದೇಶ

ಕಾಂಗ್ರೆಸ್‌ಗೆ ಕುರ್ಚಿ ಸಿಕ್ಕಿದರೆ 50ಕ್ಕೂ ಹೆಚ್ಚು ಮೀಸಲಾತಿ ಖಚಿತ: ರಾಹುಲ್‌ ಗಾಂಧಿ

ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ ನೀಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.
Photo Credit : NewsKarnataka

ಮಧ್ಯಪ್ರದೇಶ: ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಸಿಗುವ ಮೀಸಲಾತಿಯಲ್ಲಿ ಶೇ.50ಕ್ಕಿಂತ ಅಧಿಕ ಮೀಸಲಾತಿ ನೀಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.

ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮೀಸಲಾತಿ ತೆಗೆದುಹಾಕುತ್ತೇವೆ ಎನ್ನುತ್ತದೆ. ಆದರೆ ನಾವು ಶೇ.50ಕ್ಕೂ ಹೆಚ್ಚು ಮೀಸಲಾತಿಯನ್ನು ಒದಗಿಸುತ್ತೇವೆ. ಇದು ಬಡವರು, ಹಿಂದುಳಿದವರು, ದಲಿತರು, ಆದಿವಾಸಿ ಸಮುದಾಯಗಳ ಅಗತ್ಯತೆಗೆ ತಕ್ಕಹಾಗೆ ಒದಗಿಸಲಾಗುತ್ತದೆ ಎಂದರು.

ಈ ಬಾರಿ ೪೦೦ ಸೀಟುಗಳನ್ನು ದಾಟುವ ಬಿಜೆಪಿ ಭರವಸೆಗೆ ಪ್ರತಿಕ್ರಿಯಿಸಿದ ರಾಹುಲ್‌, ಅವರಿಗೆ ೧೫೦ ಸೀಟುಗಳು ಸಹ ಸಿಗಲಿಕ್ಕಿಲ್ಲ ಎಂದರು.

ʼಬಿಜೆಪಿ ಮತ್ತು ಆರ್‌.ಎಸ್‌.ಎಸ್‌ ಸಂವಿಧಾನವನ್ನು ಬದಲಾಯಿಸಲು ಬಯಸುತ್ತವೆ ಹಾಗು ಇದಕ್ಕೆ ಅವರಿಗೆ ಅಧಿಕಾರ ಬೇಕುʼ ಎಂದು ಆರೋಪಿಸಿದ ಅವರು, ಕಾಂಗ್ರೆಸ್‌ ಜಲ, ಅರಣ್ಯ ಹಾಗು ಜಮೀನಿನ ಮೇಲಿನ ಹಕ್ಕುಗಳನ್ನು ಕೊಡುವ ಸಂವಿಧಾನವನ್ನು ಉಳಿಸಲು ಪ್ರಯತ್ನಿಸುತ್ತಿದೆ ಎಂದರು.

ಮುಸ್ಲಿಮರಿಗೆ ಅನುಕೂಲವಾಗುವಂತೆ ಕಾಂಗ್ರೆಸ್‌ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಯೋಜಿಸುತ್ತಿದೆ ಎಂದ ಪ್ರಧಾನಿ ಮೋದಿಯ ಆರೋಪವನ್ನು ಕಾಂಗ್ರೆಸ್‌ ನಿರಾಕರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು