ಭೋಪಾಲ್: ಮಧ್ಯಪ್ರದೇಶ ನರ್ಮದಪುರಂ ಜಿಲ್ಲೆಯಲ್ಲಿ ಶನಿವಾರ ನದಿಯಲ್ಲಿ ಮುಳುಗಿ ಕನಿಷ್ಠ ಐವರು ಮಕ್ಕಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಆರು ಮಕ್ಕಳು ನರ್ಮದಪುರಂ ಜಿಲ್ಲೆಯ ಹಳ್ಳಿಯಲ್ಲಿರುವ ನದಿಗೆ ಸ್ನಾನ ಮಾಡಲು ಹೋಗಿದ್ದರು. ಈ ಪೈಕಿ ಐವರು ನೀರಿನಲ್ಲಿ ಮುಳುಗಿದ್ದು, ಓರ್ವನನ್ನು ರಕ್ಷಿಸಲಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ನಾಪತ್ತೆಯಾದ ಮಕ್ಕಳ ಹುಡುಕಾಟ ಆರಂಭಿಸಿದ್ದಾರೆ. ಅಲ್ಲದೆ ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಿದ್ದಾರೆ. ನದಿಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳನ್ನು ಅನಿಕೇತ್ (17), ಕರಣ್ (15), ಕಿಶನ್ (18), ಸಮೀರ್ (14) ಮತ್ತು ಬ್ರಿಜೇಶ್ (15) ಎಂದು ಗುರುತಿಸಲಾಗಿದೆ.