News Karnataka Kannada
Saturday, May 11 2024
ಮಧ್ಯ ಪ್ರದೇಶ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಸುರೇಶ್ ಪಚೌರಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಸುರೇಶ್ ಪಚೌರಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಕಾಂಗ್ರೆಸ್​​​ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಬಂದಿದ್ದಾರೆ.
Photo Credit : News Kannada

ಭೋಪಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಸುರೇಶ್ ಪಚೌರಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಕಾಂಗ್ರೆಸ್​​​ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಬಂದಿದ್ದಾರೆ.

ಇಂದು ಬೆಳಿಗ್ಗೆ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಪಕ್ಷವನ್ನು ಸೇರಿಸಿದ್ದಾರೆ.

ಗಾಂಧಿ ಕುಟುಂಬಕ್ಕೆ ನಿಕಟವರ್ತಿಯಾಗಿದ್ದ, ಪಚೌರಿ ಅವರು ಕಾಂಗ್ರೆಸ್​​​​ ಸರ್ಕಾರಲ್ಲಿ ರಕ್ಷಣಾ (ರಕ್ಷಣಾ ಉತ್ಪಾದನೆ ಮತ್ತು ಸರಬರಾಜು) ರಾಜ್ಯ ಸಚಿವರಾಗಿದ್ದರು ಮತ್ತು ಪಕ್ಷದಿಂದ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.

1998, 1999 ಮತ್ತು 2009ರ ಮೂರು ಅವಧಿಗೆ ಕಾಂಗ್ರೆಸ್​​​ನಿಂದ ಟಿಕೆಟ್‌ ಪಡೆದು, ಧಾರ್ (ಪರಿಶಿಷ್ಟ ಬುಡಕಟ್ಟುಗಳು) ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದ ರಾಜುಖೇಡಿ ಅವರು ಪ್ರಮುಖ ಬುಡಕಟ್ಟು ನಾಯಕರಾಗಿದ್ದರು. ಕಾಂಗ್ರೆಸ್‌ಗೆ ಸೇರುವ ಮೊದಲು ಅವರು 1990 ರಲ್ಲಿ ಬಿಜೆಪಿ ಶಾಸಕರಾಗಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು