ಮಧ್ಯಪ್ರದೇಶ: ಸಾಮಾನ್ಯವಾಗಿ ಮನೆ, ಕಚೇರಿ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವುದು ನೋಡಿದ್ದೇವೆ, ಆದರೆ ಇಲ್ಲಿ ರಾಹುಲ್ ದೇಶಮುಖ್ ಎಂಬ ರೈತನೊಬ್ಬ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ.
ಈ ಕ್ಯಾಮೆರಾಗಳು ಸೌರಶಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದು, ವಿಶೇಷ ಏನೆಂದರೆ ಅನುಮಾನಾಸ್ಪದವಾಗಿ ಏನಾದರು ಕಂಡುಬಂದರೆ ಅಲಾರಾಂ ಸದ್ದು ಮಾಡುತ್ತದೆ.ಬೆಳ್ಳುಳ್ಳಿ ಬೆಲೆ ರಾಕೆಟ್ ವೇಗದಲ್ಲಿ ಏರಿಕೆ ಕಾಣುತ್ತಿದ್ದು, ಮಹಾರಾಷ್ಟ್ರದಲ್ಲಿ ಕೆಜಿಗೆ 600 ರೂಪಾಯಿಗಳ ಗಡಿ ದಾಟಿದೆ.ಇತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ ಸಾಕಷ್ಟು ಟ್ರೆಂಡ್ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ.
ಹಾಗಾಗಿ ಕೆಲವು ಕಡೆ ಬೆಳ್ಳುಳ್ಳಿ ಕಳ್ಳತನ ಕೂಡ ಹೆಚ್ಚಾಗಿದೆ. ಕಳೆದ 60 ವರ್ಷಗಳಲ್ಲಿ ಬೆಳ್ಳುಳ್ಳಿ ಬೆಲೆ ಇಷ್ಟೊಂದು ಏರಿಕೆ ಕಂಡಿರಲಿಲ್ಲ . ಆದರೆ ಈಗ ಬೆಳ್ಳುಳ್ಳಿ ಕೃಷಿ ಮಾಡಿದ ರೈತರು ಶ್ರೀಮಂತರಾದರೂ ಕೂಡ ತಮ್ಮ ಬೆಳೆ ಕಳ್ಳತನವಾಗುವ ಭೀತಿಯಲ್ಲಿದ್ದಾರೆ. ಈ ಕಾರಣ ಮಧ್ಯಪ್ರದೇಶದ ಚಿಂದ್ವಾಡ ಜಿಲ್ಲೆಯ ಮೊಹ್ಖೇದ್ ಪ್ರದೇಶದ ಐದಾರು ಗ್ರಾಮಗಳ ಹೊಲಗಳಲ್ಲಿ ರೈತರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.