ಮಧ್ಯಪ್ರದೇಶ: ಮಧ್ಯಪ್ರದೇಶದ ಕಟ್ನಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತದ ವಿಶೇಷ ಪೊಲೀಸ್ ತಂಡವನ್ನು(ಎಸ್ ಪಿಇ) ಕಂಡು ಲಂಚವಾಗಿ ತೆಗೆದುಕೊಂಡ ಹಣವನ್ನು ನುಂಗಿದ ವಿಲಕ್ಷಣ ಘಟನೆ ವರದಿಯಾಗಿದೆ.
ಜುಲೈ 24ರ ಸೋಮವಾರ ಕಂದಾಯ ಇಲಾಖೆಯ ಅಧಿಕಾರಿ ಪಟ್ವಾರಿ ಗಜೇಂದ್ರ ಸಿಂಗ್ ಅವರು ತಮ್ಮ ಖಾಸಗಿ ಕಚೇರಿಯಲ್ಲಿ ₹ 5,000 ಲಂಚ ಸ್ವೀಕರಿಸಿದಾಗ ಲೋಕಾಯುಕ್ತದ ವಿಶೇಷ ಪೊಲೀಸ್ ತಂಡ ಹಾಕಿದ ಬಲೆಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಲಂಚವಾಗಿ ಪಡೆದ ಹಣವನ್ನು ನುಂಗಲು ಯತ್ನಸಿದ್ದಾರೆ ಎಂದು ಎಸ್ ಪಿಇ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಸಾಹು ತಿಳಿಸಿದ್ದಾರೆ.
‘ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಗಜೇಂದ್ರ ಸಿಂಗ್ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ನಮಗೆ ದೂರು ನೀಡಿದ್ದರು. ಹಣವನ್ನು ತೆಗೆದುಕೊಂಡ ಸಂದರ್ಭದಲ್ಲಿ, ಶ್ರೀ ಸಿಂಗ್ ಎಸ್ಪಿಇ ತಂಡವನ್ನು ನೋಡಿದ ತಕ್ಷಣ ಲಂಚವಾಗಿ ಪಡೆದ ಹಣವನ್ನು ನುಂಗಲು ಯತ್ನಿಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಚೆನ್ನಾಗಿದ್ದಾರೆ’ ಎಂದು ವೈದ್ಯರು ಹೇಳಿದರು ಎಂದು ಅಧಿಕಾರಿ ಹೇಳಿದರು.
A patwari in Katni, allegedly swallowed money he had accepted as a bribe after noticing a team of the Lokayukta's Special Police Establishment pic.twitter.com/AgsOyDsnGM
— Anurag Dwary (@Anurag_Dwary) July 24, 2023
ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.