News Karnataka Kannada
Tuesday, May 07 2024
ಮಧ್ಯ ಪ್ರದೇಶ

ವಿಡಿಯೋ: ಖಾಕಿ ಎದುರೇ ಲಂಚ ಪಡೆದ 5,000ರೂ. ಹಣ ನುಂಗಿದ ಅಧಿಕಾರಿ

Money On Spotting
Photo Credit : Twitter

ಮಧ್ಯಪ್ರದೇಶ: ಮಧ್ಯಪ್ರದೇಶದ ಕಟ್ನಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತದ ವಿಶೇಷ ಪೊಲೀಸ್ ತಂಡವನ್ನು(ಎಸ್ ಪಿಇ) ಕಂಡು ಲಂಚವಾಗಿ ತೆಗೆದುಕೊಂಡ ಹಣವನ್ನು ನುಂಗಿದ ವಿಲಕ್ಷಣ ಘಟನೆ ವರದಿಯಾಗಿದೆ.

ಜುಲೈ 24ರ ಸೋಮವಾರ ಕಂದಾಯ ಇಲಾಖೆಯ ಅಧಿಕಾರಿ ಪಟ್ವಾರಿ ಗಜೇಂದ್ರ ಸಿಂಗ್ ಅವರು ತಮ್ಮ ಖಾಸಗಿ ಕಚೇರಿಯಲ್ಲಿ ₹ 5,000 ಲಂಚ ಸ್ವೀಕರಿಸಿದಾಗ ಲೋಕಾಯುಕ್ತದ ವಿಶೇಷ ಪೊಲೀಸ್ ತಂಡ ಹಾಕಿದ ಬಲೆಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಲಂಚವಾಗಿ ಪಡೆದ ಹಣವನ್ನು ನುಂಗಲು ಯತ್ನಸಿದ್ದಾರೆ ಎಂದು ಎಸ್ ಪಿಇ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಸಾಹು ತಿಳಿಸಿದ್ದಾರೆ.

‘ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಗಜೇಂದ್ರ ಸಿಂಗ್ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ನಮಗೆ ದೂರು ನೀಡಿದ್ದರು. ಹಣವನ್ನು ತೆಗೆದುಕೊಂಡ ಸಂದರ್ಭದಲ್ಲಿ, ಶ್ರೀ ಸಿಂಗ್ ಎಸ್‌ಪಿಇ ತಂಡವನ್ನು ನೋಡಿದ ತಕ್ಷಣ ಲಂಚವಾಗಿ ಪಡೆದ ಹಣವನ್ನು ನುಂಗಲು ಯತ್ನಿಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಚೆನ್ನಾಗಿದ್ದಾರೆ’ ಎಂದು ವೈದ್ಯರು ಹೇಳಿದರು ಎಂದು ಅಧಿಕಾರಿ ಹೇಳಿದರು.

 

ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು