ಭೋಪಾಲ್: ಮೊರೆನಾ ಪ್ರದೇಶದಲ್ಲಿ ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯನ್ನು ರೈಲ್ವೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮೊರೆನಾ ಜಿಲ್ಲೆಯ ಬಾನ್ಮೋರ್ ರೈಲು ನಿಲ್ದಾಣದಲ್ಲಿ ಭಾನುವಾರ ಈ ಘಟನೆ ಸಂಭವಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಫಿರೋಜ್ ಖಾನ್ (20) ಎಂಬಾತನನ್ನು ಬಂಧಿಸಲಾಗಿದೆ.
ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶಕ್ಕೆ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸಿದ್ದು, ಏಪ್ರಿಲ್ 1 ರಂದು ಮೊದಲ ರೈಲು ಸಂಚಾರ ಆರಂಭವಾಗಿತ್ತು.