News Karnataka Kannada
Thursday, May 02 2024
ಮಧ್ಯ ಪ್ರದೇಶ

ಬಿಯರ್ ಮೇಲೆ 50 ರೂಪಾಯಿ ಹೆಚ್ಚುವರಿ ಶುಲ್ಕ: ಮರವನ್ನೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಮಧ್ಯಪ್ರದೇಶದ ರಾಜ್‌ಗಢ್ ಜಿಲ್ಲೆಯಲ್ಲಿ ಬಿಯರ್ ಬಾಟಲ್ ಮೇಲೆ 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬರು ಮರವನ್ನೇರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
Photo Credit : NewsKarnataka

ಭೋಪಾಲ್: ಮಧ್ಯಪ್ರದೇಶದ ರಾಜ್‌ಗಢ್ ಜಿಲ್ಲೆಯಲ್ಲಿ ಬಿಯರ್ ಬಾಟಲ್ ಮೇಲೆ 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬರು ಮರವನ್ನೇರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಜಿಲ್ಲೆಯ ನಿವಾಸಿ ಬ್ರಿಜ್‌ ಮೋಹನ್ ಶಿವಹರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಮಧ್ಯಪ್ರದೇಶ ರಾಜ್ಯ ಸರ್ಕಾರ 100 ಇರುವ ಮದ್ಯದ ಮೇಲೆ 20 ರೂ. ಹಾಗೂ ಬಿಯರ್ ಬಾಟಲ್​ಗೆ​ 30 ರೂಪಾಯಿ ಹೆಚ್ಚಳ ಮಾಡಿದೆ. ಒಟ್ಟು 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದಂತೆ ಆಗಿದೆ. ಇದನ್ನು ಪ್ರಶ್ನಿಸಿ ವ್ಯಕ್ತಿಯು ಮುಖ್ಯಮಂತ್ರಿ ಸಹಾಯವಾಣಿ, ಜಿಲ್ಲಾಧಿಕಾರಿಗಳಿಗೆ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಫೆಬ್ರವರಿಯಲ್ಲಿ ದೂರು ನೀಡಿದ್ದರು.

ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರಗೊಂಡ ವ್ಯಕ್ತಿ ಮರವನ್ನೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಈ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹರಸಾಹಸಪಟ್ಟು ವ್ಯಕ್ತಿಯನ್ನು ಕೆಳಗಿಳಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು