ಭೋಪಾಲ್: ಮಧ್ಯಪ್ರದೇಶದ ರಾಜ್ಗಢ್ ಜಿಲ್ಲೆಯಲ್ಲಿ ಬಿಯರ್ ಬಾಟಲ್ ಮೇಲೆ 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬರು ಮರವನ್ನೇರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಜಿಲ್ಲೆಯ ನಿವಾಸಿ ಬ್ರಿಜ್ ಮೋಹನ್ ಶಿವಹರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಮಧ್ಯಪ್ರದೇಶ ರಾಜ್ಯ ಸರ್ಕಾರ 100 ಇರುವ ಮದ್ಯದ ಮೇಲೆ 20 ರೂ. ಹಾಗೂ ಬಿಯರ್ ಬಾಟಲ್ಗೆ 30 ರೂಪಾಯಿ ಹೆಚ್ಚಳ ಮಾಡಿದೆ. ಒಟ್ಟು 50 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಿದಂತೆ ಆಗಿದೆ. ಇದನ್ನು ಪ್ರಶ್ನಿಸಿ ವ್ಯಕ್ತಿಯು ಮುಖ್ಯಮಂತ್ರಿ ಸಹಾಯವಾಣಿ, ಜಿಲ್ಲಾಧಿಕಾರಿಗಳಿಗೆ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಫೆಬ್ರವರಿಯಲ್ಲಿ ದೂರು ನೀಡಿದ್ದರು.
ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರಗೊಂಡ ವ್ಯಕ್ತಿ ಮರವನ್ನೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಈ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹರಸಾಹಸಪಟ್ಟು ವ್ಯಕ್ತಿಯನ್ನು ಕೆಳಗಿಳಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.