ಮಧ್ಯಪ್ರದೇಶ: ಇತ್ತೀಚೆಗೆ ನಟ ದರ್ಶನ್ ಮನೆ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ್ದು ಸುದ್ದಿಯಾಗಿ ಠಾಣೆ ಮೆಟ್ಟಿಲೇರಿತ್ತು. ಇದೀಗ ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.
ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಇದ್ದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ತಿಳಿಸಿದ್ದಾರೆ. 65 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಿಂದ ಹೊರಬಂದಿದ್ದರು ಮತ್ತು ಆ ವ್ಯಕ್ತಿ ಜತೆ ಜಗಳಕ್ಕಿಳಿದಿದ್ದರು.
ಆತ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ, ಆಕೆ ತಕ್ಷಣ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಹಿಳೆ ಪ್ರಾಣ ಹೋಗಿತ್ತು.