ಭೋಪಾಲ್: ಜಬಲ್ಪುರ್-ನವದೆಹಲಿ ಇಂಡಿಗೋ ವಿಮಾನದಲ್ಲಿ ಸೋಮವಾರ ಪ್ರಯಾಣಿಕನೊಬ್ಬ ಹೃದಯ ಸ್ತಂಭನಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಟೇಕ್ ಆಫ್ ಆದ ಕೂಡಲೇ ಈ ಘಟನೆ ಸಂಭವಿಸಿದ್ದು, ಜಬಲ್ಪುರದಲ್ಲಿ ಮತ್ತೆ ವಿಮಾನ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಮೃತ ಪ್ರಯಾಣಿಕನನ್ನು ರಾಜೇಂದ್ರ ಫ್ರಾಂಕ್ವೆಲಿನ್ ಎಂದು ಗುರುತಿಸಲಾಗಿದೆ.
ವಿಮಾನ ಟೇಕಾಫ್ ಆಗುತ್ತಿದ್ದಂತೆಯೇ ಅವರಿಗೆ ಹೃದಯಾಘಾತವಾಗಿತ್ತು. ನಂತರ, ವಿಮಾನವು ಜಬಲ್ಪುರಕ್ಕೆ ಮರಳಿದೆ. ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರ ತಂಡ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.