ಮಧ್ಯ ಪ್ರದೇಶ: ಮಧ್ಯಪ್ರದೇಶದದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೋದಿ ಸರ್ಕಾರ ಪಾಕಿಸ್ತಾನದ ಮನೆಗೆ ನುಗ್ಗಿ ಉಗ್ರರನ್ನು ಕೊಂದಿತು. ಈ ಜನರು ಯಾವಾಗಲೂ ತ್ರಿವರ್ಣ ಧ್ವಜವನ್ನು ಅವಮಾನಿಸುತ್ತಿದ್ದರು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಧ್ವಜಕ್ಕೆ ಕೀರ್ತಿ ತಂದರು. ಡಬಲ್ ಇಂಜಿನ್ ಸರ್ಕಾರ ರಚನೆ ಮಾಡಿದರೆ ಈಗಿರುವ ಸಮ್ಮಾನ್ ನಿಧಿಯ 6 ಸಾವಿರ ರೂ.ಗಳನ್ನು 12 ಸಾವಿರ ರೂ.ಗೆ ಪರಿವರ್ತಿಸುತ್ತೇವೆ ಎಂದರು.
ರಾಹುಲ್ ಗಾಂಧಿ ಅಂದು ಹೇಳಿದ್ದರು, 370ನೇ ವಿಧಿಯನ್ನು ತೆಗೆದುಹಾಕಬೇಡಿ, ಕಾಶ್ಮೀರದಲ್ಲಿ ರಕ್ತದ ನದಿ ಹರಿಯುತ್ತದೆ ಎಂದು ಆದರೆ ಅಂಥಹ ಯಾವುದೇ ಘಟನೆಗಳು ನಡೆದಿಲ್ಲ, ಸೋನಿಯಾ-ಮನಮೋಹನ್ ಸರ್ಕಾರದ ಅವಧಿಯಲ್ಲಿ ಆಲಿಯಾ, ಮಲಿಯಾ, ಜಮಾಲಿಯಾ ಪಾಕಿಸ್ತಾನದಿಂದ ನುಗ್ಗಿ ದಾಳಿ ನಡೆಸುತ್ತಿದ್ದರು ಎಂದು ನೆನೆಪಿಸಿಕೊಂಡರು .
ಮೋದಿಯವರು ಒಂಬತ್ತು ವರ್ಷಗಳಲ್ಲಿ ಏನು ಹೇಳಿದ್ದಾರೋ ಅದನ್ನೇ ಮಾಡಿದ್ದಾರೆ. ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲು ನೀವು ಸಹಾಯ ಮಾಡಬೇಕು, ಮುಂದಿನ ದಿನಗಳಲ್ಲಿ 10 ಲಕ್ಷದವರೆಗೆ ಉಚಿತ ಚಿಕಿತ್ಸೆ, 82 ಲಕ್ಷ ತಾಯಂದಿರು ಮತ್ತು ಸಹೋದರಿಯರಿಗೆ ಉಜ್ವಲ ಅನಿಲ ಸಂಪರ್ಕವನ್ನು ನೀಡಲಾಗುತ್ತದೆ ಎಂದರು.
ನವೆಂಬರ್ 17 ರಂದು ಮಧ್ಯಪ್ರದೇಶ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಹೊರಬರಲಿದೆ.