ಭೋಪಾಲ್: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋಹನ್ ಯಾದವ್ ಸರ್ಕಾರ ಬಿಜೆಪಿ ನೀಡಿದ್ದ ಉಚಿತ ಭರವಸೆಗಳನ್ನ ಈಡೇರಿಸಲು ಆರ್ಬಿಐಯಲ್ಲಿ 2,000 ಕೋಟಿ ರೂ. ಸಾಲ ಕೇಳಿದೆ.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ 96 ಪುಟಗಳ `ಸಂಕಲ್ಪ ಪತ್ರ’ ಹೆಸರಿನ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಬಿಜೆಪಿ ನೀಡಿದ ಉಚಿತ ಭರವಸೆಗಳನ್ನು ಈಡೇರಿಲು ನೂತನ ಸಿಎಂ ಆರ್ಬಿಐ ಸಾಲ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವರ. ಸಾಲದ ಹೊರೆ ಹೊತ್ತಿದ್ದ ನೂತನ ಸರ್ಕಾರ ಮತ್ತೆ ಸಾಲಕ್ಕಾಗಿ ಆರ್ಬಿಐ ಮೊರೆ ಹೋಗಿದೆ.