ಭೋಪಾಲ್: ನಗರದಲ್ಲಿ ಬೀದಿನಾಯಿಗಳಿಂದ ಕಚ್ಚಿಸಿಕೊಂಡ 40ಕ್ಕೂ ಹೆಚ್ಚು ವ್ಯಕ್ತಿಗಳು ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು (ಜ.16)ರ ಮಂಗಳವಾರದಂದು ಸಂಜೆ ವೇಳೆ ಆಸ್ಪತ್ರೆಗೆ ಬಂದಿದ್ದರು.
ಈಗಾಗಲೇ ಮುನ್ಸಿಪಲ್ ಕಾರ್ಪೊರೇಷನ್ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಿದೆ. ಮಂಗಳವಾರ ಸಂಜೆ, ಮೇಯರ್ ಮಾಲ್ತಿ ರೈ ಅವರು ಪಾಲಿಕೆ ಅಧಿಕಾರಿಗಳ ಸಭೆಯನ್ನು ಕರೆದರು, ಈ ವೇಳೆ ಪಾಲಿಕೆ ಆಯುಕ್ತ ನೋಬಲ್ ಫ್ರಾಂಕ್ ಸಹ ಹಾಜರಿದ್ದರು. ಆದಷ್ಟು ಬೇಗ ಬೀದಿ ನಾಯಿಗಳನ್ನು ಹಿಡಿಯುವಂತೆ ಅಧಿಕಾರಿಗಳಿಗೆ ಮೇಯರ್ ಸೂಚಿಸಿದರು. ಸಾಕುಪ್ರಾಣಿಗಳ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ಮನೆಯಲ್ಲಿ ಅಥವಾ ಗೂಡಿನಲ್ಲಿ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ.