News Karnataka Kannada
Monday, April 29 2024
ಮಧ್ಯ ಪ್ರದೇಶ

ಅಪಹರಣ ನಾಟಕವಾಡಿ ತಂದೆ ಬಳಿ 30 ಲಕ್ಷ ರೂ,ಗೆ ಬೇಡಿಕೆ ಇಟ್ಟ ಮಗಳು

Mp Grl
Photo Credit : NewsKarnataka

ಮಧ್ಯಪ್ರದೇಶ: ತಾನು ಕಿಡ್ನ್ಯಾಪ್​ ಆಗಿದ್ದೇನೆ ಎಂದು ಮಗಳೊಬ್ಬಳು ತಂದೆಗೆ ಸುಳ್ಳು ಹೇಳಿ 30 ಲಕ್ಷ ರೂ. ದೋಚಲು ಪ್ರಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋಟಾಗೆ ಅಧ್ಯಯನಕ್ಕೆಂದು ಹೋಗಿದ್ದ ವಿದ್ಯಾರ್ಥಿನಿ ಕಾವ್ಯಾ ಅಲ್ಲಿಂದ ವಿದೇಶಕ್ಕೆ ಹೋಗಲು ನಿರ್ಧರಿಸಿದ್ದಳು. ಹಾಗಾಗಿ ತಾನು ಅಪಹರಣವಾಗಿದ್ದೇನೆಂದು ತಂದೆಗೆ ಸುಳ್ಳು ಫೋಟೊ ಕಳಿಸಿ 30 ಲಕ್ಷ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಳು.

ಕೋಟಾದ ಹಾಸ್ಟೆಲ್‌ಗೆ ಕೋಚಿಂಗ್​ಗೆ ಸೇರಲು ತನ್ನ ತಾಯಿಯೊಂದಿಗೆ ಕಾವ್ಯಾ ಬಂದಿದ್ದಳು. ಹಾಸ್ಟೆಲ್‌ನಲ್ಲಿ ಕೇವಲ ಮೂರು ದಿನಗಳನ್ನು ಕಳೆದಿದ್ದಷ್ಟೆ ನಂತರ ತನ್ನ ಸ್ನೇಹಿತರೊಬ್ಬರೊಂದಿಗೆ ಇಂದೋರ್‌ಗೆ ಹೋಗಿದ್ದಳು ಅವರು ಕೂಡ ವಿದೇಶಕ್ಕೆ ಪ್ರಯಾಣಿಸಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 18 ರಂದು, ಕಾವ್ಯಾ ತಂದೆ ರಘುವೀರ್ ಧಾಕಡ್ ಅವರು ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಕೋಟಾ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ತನಿಖೆ ನಡೆಸಿ ಇಂದೋರ್​ನಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಇನ್ನು ತನಿಖೆಗೆ ಸಹಕರಿಸಿದ ಕಾವ್ಯಾಳ ಸ್ನೇಹಿತರೊಬ್ಬರು ಮಾತನಾಡಿ, ಕಾವ್ಯ ಮತ್ತು ಆಕೆಯ ಸ್ನೇಹಿತರೊಬ್ಬರು ವಿದೇಶಕ್ಕೆ ಹೋಗಲು ಬಯಸಿದ್ದರು ಆದರೆ ಸಾಕಷ್ಟು ಹಣವಿರಲಿಲ್ಲ ಹಾಗಾಗಿ ಅಪಹರಣ ನಾಟಕವಾಡಿದ್ದಾರೆ ಎಂದು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು