ಮಧ್ಯಪ್ರದೇಶ: ಇಲ್ಲಿನ ಮಹಿಳೆಯೊಬ್ಬರು ವಿವಾಹವಾದ ಐದು ತಿಂಗಳು ಕಳೆಯುಷ್ಟರಲ್ಲೇ ಪತಿಯಿಂದ ವಿಚ್ಛೇದನವನ್ನು ಕೋರಿದ್ದಾರೆ. ಹನಿಮೂನ್ಗೆ ಗೋವಾ ಬದಲು ಅಯೋಧ್ಯೆ ಮತ್ತು ವಾರಣಾಸಿಗೆ ಕರೆದೊಯ್ದಿದ್ದಾರೆ ಎನ್ನುವ ಕಾರಣಕ್ಕೆ ಮಹಿಳೆ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ.
ಜನವರಿ 19 ರಂದು ಭೋಪಾಲ್ ಕೌಟುಂಬಿಕ ನ್ಯಾಯಾಲಯಕ್ಕೆ ಈ ಪ್ರಕರಣ ಬಂದಿದ್ದು, ವಿಚಾರಣೆ ಮುಂದುವರಿದಿದೆ.ತನ್ನ ಪತಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದಾರೆ. ತಾನೂ ಕೂಡ ದುಡಿಯುತ್ತಿದ್ದು, ಚೆನ್ನಾಗಿ ಸಂಪಾದಿಸುತ್ತಿದ್ದೇನೆ. ಹನಿಮೂನ್ಗೆ ವಿದೇಶಕ್ಕೆ ಹೋಗುವುದು ನಮಗೆ ದೊಡ್ಡ ವಿಷಯವಾಗಿರಲಿಲ್ಲ. ಯಾವುದೇ ಹಣಕಾಸಿನ ಅಡಚಣೆಯೂ ಇರಲಿಲ್ಲ. ಆದರೆ ನನ್ನ ಪತಿ ವಿದೇಶಕ್ಕೆ ಕರೆದೊಯ್ಯಲು ನಿರಾಕರಿಸಿದ್ದು, ಭಾರತದಲ್ಲಿಯೇ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವ ಭರವಸೆ ನೀಡಿದ್ದರು ಎಂದು ಮಹಿಳೆ ವಿಚ್ಛೇದನ ಅರ್ಜಿಯಲ್ಲಿ ತಿಳಿಸಿದ್ದಾರೆ.
ತಮ್ಮ ಹೆತ್ತವರನ್ನು ನೋಡಿಕೊಳ್ಳಬೇಕು ಎನ್ನುವ ಕಾರಣ ನೀಡಿದ ಪತಿ ಹನಿಮೂನ್ಗಾಗಿ ಗೋವಾ ಅಥವಾ ದಕ್ಷಿಣ ಭಾರತಕ್ಕೆ ಕರೆದುಕೊಂಡು ಹೋಗುವ ಭರವಸೆ ನೀಡಿದ್ದು, ಪತ್ನಿಯೂ ಅದನ್ನು ಒಪ್ಪಿಕೊಂಡಿದ್ದಳು. ಆದರೆ ಪ್ರವಾಸದ ಒಂದು ದಿನದ ಮೊದಲು ಪತಿ ಪತ್ನಿಗೆ ಶಾಕ್ ನೀಡಿದ್ದಾನೆ. ಗೋವಾ ಬದಲು ಅಯೋಧ್ಯೆ ಮತ್ತು ವಾರಣಾಸಿಗೆ ವಿಮಾನ ಟಿಕೆಟ್ಗಳನ್ನು ಬುಕ್ ಮಾಡಿರುವುದು ಪತ್ನಿಗೆ ತಿಳಿದು ಬಂದಿದೆ. ಇದರಿಂದ ಆಕೆ ನೊಂದುಕೊಂಡಿದ್ದಳು. ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದ ಮೊದಲು ತಾಯಿ ಅಯೋಧ್ಯೆ ನೋಡಲು ಬಯಸಿದರು ಎನ್ನುವ ಕಾರಣಕ್ಕೆ ಆತ ಪತ್ನಿಯೊಂದಿಗಿನ ಗೋವಾ ಟ್ರಿಪ್ ಕ್ಯಾನ್ಸಲ್ ಮಾಡಿ ಕುಟುಂಬಸ್ಥರೊಂದಿಗೆ ಅಯೋಧ್ಯೆ ಟ್ರಿಪ್ಗೆ ತೆರಳಿದ್ದಾರೆ.
ಈ ವೇಳೆ ಪತಿಯೊಂದಿಗೆ ಹೋದ ಪತ್ನಿ ಏನು ಮಾತನಾಡದೇ ಸುಮ್ಮನಿದ್ದಳು ಎನ್ನಲಾಗಿದೆ. ಆ ಸಮಯದಲ್ಲಿ ಪ್ರವಾಸಕ್ಕೆ ವಿರೋಧ ವ್ಯಕ್ತಪಡಿಸದೇ, ಏನು ತಕರಾರು ಮಾಡದೇ ಮಹಿಳೆ ಪತಿ ಹಾಗೂ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ತೆರಳಿದ್ದಾಳೆ. ಆದರೆ ಈ ಯಾತ್ರಾ ಸ್ಥಳಗಳಿಂದ ಹಿಂತಿರುಗಿದ ಕೂಡಲೇ ಆಕೆ ತನ್ನ ಪತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…
ಶಾಸಕ ಇಕ್ಬಾಲ್ ಹಸೇನ್ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ…
ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ
ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…