ಮುಂಬೈ: ಸ್ನೇಹಿತನ ಜತೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಬಾಲಕಿಯೊಬ್ಬಳ ಮಾತನ್ನು ಅಪ್ಪ ಕೇಳಿದನೆಂದು, ಹೆದರಿ 6ನೇ ಮಹಡಿಯಿಂದ ಹಾರಿರುವ ಘಟನೆ ಮುಂಬೈನಲ್ಲಿ ನಡೆದಿದೆ.ಆರನೇ ಮಹಡಿಯಲ್ಲಿ ವಾಸವಾಗಿರುವ ಈ ಬಾಲಕಿ ಗೆಳೆಯನ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದಳು. ಪ್ರೀತಿ-ಪ್ರೇಮದ ವಿಷಯ ಮಾತನಾಡುತ್ತಿದ್ದುದನ್ನು ಆಕೆಯ ತಂದೆ ಹೊರಗೆ ನಿಂತು ಕೇಳಿಸಿಕೊಂಡಿದ್ದಾರೆ. ಮಗಳಿಗೆ ಬೈಯುವ ನಿಟ್ಟಿನಲ್ಲಿ ಅವರು ಹತ್ತಿರ ಬಂದಿದ್ದಾರೆ,ಭಯದಲ್ಲಿ ಇಳಿಯುತ್ತಿದ್ದುದರಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.
ಮುಂಬೈನ ವೆರ್ ಸೋವಾ ನಿವಾಸಿಯಾಗಿರುವ 16 ವರ್ಷದ ಬಾಲಕಿ ಈಗ ಸಾವು-ನೋವಿನ ನಡುವೆ ಆಸ್ಪತ್ರೆಯಲ್ಲಿ ಹೋರಾಟ ನಡೆಸಿದ್ದಾಳೆ.
ಈಕೆ ಬದುಕುವ ಸಾಧ್ಯತೆ ತೀರಾ ಕಡಿಮೆ ಇರುವುದಾಗಿ ವೈದ್ಯರು ಹೇಳಿದ್ದಾರೆ.ಇದನ್ನು ನೋಡಿ ಬಾಲಕಿ ಭಯಗೊಂಡಿದ್ದಾಳೆ. ಅಪ್ಪ ಏನಾದರೂ ಮಾಡಿಬಿಡಬಹುದು ಎಂಬ ಭಯದಿಂದ ಅಲ್ಲಿಯೇ ಇದ್ದ ತಾಯಿಯ ಸೀರೆಯನ್ನು ಕಿಟಕಿಗೆ ಕಟ್ಟಿ ಅಲ್ಲಿಂದ ಇಳಿಯಲು ಪ್ರಯತ್ನಿಸಿದ್ದಾಳೆ. ಆದರೆ ಭಯದಲ್ಲಿ ಇಳಿಯುತ್ತಿದ್ದುದರಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.
ಕೂಡಲೇ ಸ್ಥಳೀಯರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಡುಗಿಯ ಬೆನ್ನುಮೂಳೆಗೆ ಗಂಭೀರ ಪೆಟ್ಟಾಗಿದ್ದು, ಬದುಕುವ ಸಾಧ್ಯತೆ ಕಡಿಮೆ ಇರುವುದಾಗಿ ವೈದ್ಯರು ಹೇಳಿದ್ದಾರೆ.
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…
ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…
ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…
ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…
ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…