ಪ್ರಾಜೆಕ್ಟ್-75 ಅಡಿಯಲ್ಲಿ ದೇಶೀಯವಾಗಿನಿರ್ಮಾಣವಾಗಿರುವ ಐಎನ್ಎಸ್ ವಾಘ್ಶೀರ್ ಜಲಾಂತರ್ಗಾಮಿ ನೌಕೆಯನ್ನು ಇಂದು ಮುಂಬೈನಲ್ಲಿ ಉದ್ಘಾಟಿಸಲಾಯಿತು.
ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಜಲಾಂತಾರ್ಗಾಮಿಯನ್ನು ಉದ್ಘಾಟಿಸಿದರು. ದೇಶೀಯವಾಗಿ ನಿರ್ಮಾಣವಗಿರುವ ಸ್ಕಾರ್ಪಿನ್ ದರ್ಜೆಯ 6 ನೇ ಸಬ್ ಮರೀನ್ ಇದಾಗಿದೆ.
ಈ ಕುರಿತು ಮಾತನಾಡಿದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ “ಭಾರತವು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುತ್ತಿದೆ ಎಂಬುದಕ್ಕೆ ಐಎನ್ಎಸ್ ವಾಘ್ಶೀರ್ ಉತ್ತಮ ಉದಾಹರಣೆಯಾಗಿದೆ. ಪ್ರಸ್ತುತ ಸಮುದ್ರ ಪ್ರಯೋಗದ ನಂತರ ವಾಘ್ಶೀರ್ ನೌಕೆ ಕಾರ್ಯಾರಂಭ ಮಾಡಲಿದೆ” ಎಂದು ಹೇಳಿದರು.
ಪ್ರಾಜೆಕ್ಟ್-75 ರ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟೂ 6 ಸ್ಕಾರ್ಪೀನ್ ದರ್ಜೆಯ ಸಬ್-ಮರೀನ್ ಗಳನ್ನು ನಿರ್ಮಾಣ ಮಾಡಲಾಗಿದ್ದು ಸ್ಕಾರ್ಪೀನ್ ವರ್ಗದಲ್ಲಿರುವ ಜಲಾಂತರ್ಗಾಮಿ ನೌಕೆಗಳು ಡೀಸೆಲ್-ಎಲೆಕ್ಟ್ರಿಕ್ ಪ್ರೊಪಲ್ಷನ್ ಸಿಸ್ಟಮ್ಗಳಿಂದ ಕಾರ್ಯನಿರ್ವಹಿಸುತ್ತವೆ.
ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಇವು ಮೇಲ್ಮೈ ಹಡಗು ಯುದ್ಧ, ಜಲಾಂತರ್ಗಾಮಿ ಯುದ್ಧ, ಗುಪ್ತಚರ ಸಂಗ್ರಹಣೆ, ಮೈನ್ ಲೈಯಿಂಗ್, ಸರ್ವೇಲೆನ್ಸ್ ಮುಂತಾದ ಹಲವು ಕಾರ್ಯಗಳನ್ನು ನಿರ್ವಹಿಸಬಹುದಾದ ಸಾಮರ್ಥ್ಯವನ್ನು ಹೊಂದಿವೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…