ಯವತ್ಮಾಲ್: ಮಹಾರಾಷ್ಟ್ರದ ಯವತ್ಮಾಲ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ಏಳು ವೈದ್ಯರ ವಿರುದ್ಧ ಬಾಲಕನ ಸಾವಿಗೆ ಸಂಬಂಧಿಸಿ ವೈದ್ಯಕೀಯ ನಿರ್ಲಕ್ಷ್ಯದ ಆರೋಪದಲ್ಲಿ ಅಪರಾಧ ಪ್ರಕರಣವೊಂದನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.
2021ರ ಸೆಪ್ಟೆಂಬರ್ನಲ್ಲಿ ಮೃತಪಟ್ಟ ಬಾಲಕನ ತಾಯಿಯು ನೀಡಿದ ದೂರಿನ ಹಿನ್ನೆಲೆ ಲಾಹೋರ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 (ಎ) (ನಿರ್ಲಕ್ಷ್ಯದಿಂದ ಸಾವು) ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.
ತಮ್ಮ ಮಗ ವಿಪರೀತ ವಾಂತಿ ಮಾಡುತ್ತಿದ್ದರಿಂದ ಚಿಕಿತ್ಸೆಗೆ ಆತನನ್ನು ಸೆಪ್ಟೆಂಬರ್ 18 ರಂದು ಜಿಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ನೀಡದೆ ವಾರ್ಡ್ಗಳಿಗೆ ಸ್ಥಳಾಂತರಿಸುತ್ತಿದ್ದರು. ನಂತರ ವಾರ್ಡ್ವೊಂದರಲ್ಲಿ ಆತ ಮೃತಪಟ್ಟನು ಎಂದು ತಾಯಿ ದೂರಿನಲ್ಲಿ ಹೇಳಿದ್ದಾರೆ.
ಆಸ್ಪತ್ರೆಯ ಅಪಘಾತ ವಿಭಾಗದ ನಾಲ್ವರು ಕಿರಿಯರು ಸೇರಿ ಏಳು ವೈದ್ಯರ ನಿರ್ಲಕ್ಷ್ಯದಿಂದ ತನ್ನ ಮಗ ಸಾವನ್ನಪ್ಪಿದ್ದಾನೆ ಎಂದು ತಾಯಿ ದೂರಿದ್ದಾರೆ ಎಂದು ಅಧಿಕಾರಿ ವಿವರಿಸಿದರು.