News Karnataka Kannada
Monday, April 29 2024
ಮಹಾರಾಷ್ಟ್ರ

ಜಿಎಂಸಿಎಚ್‌ನ 7 ವೈದ್ಯರ ವಿರುದ್ಧ ಪ್ರಕರಣ ದಾಖಲು

Arrest
Photo Credit :

ಯವತ್ಮಾಲ್‌: ಮಹಾರಾಷ್ಟ್ರದ ಯವತ್ಮಾಲ್‌ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್‌) ಏಳು ವೈದ್ಯರ ವಿರುದ್ಧ ಬಾಲಕನ ಸಾವಿಗೆ ಸಂಬಂಧಿಸಿ ವೈದ್ಯಕೀಯ ನಿರ್ಲಕ್ಷ್ಯದ ಆರೋಪದಲ್ಲಿ ಅಪರಾಧ ಪ್ರಕರಣವೊಂದನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

2021ರ ಸೆಪ್ಟೆಂಬರ್‌ನಲ್ಲಿ ಮೃತಪಟ್ಟ ಬಾಲಕನ ತಾಯಿಯು ನೀಡಿದ ದೂರಿನ ಹಿನ್ನೆಲೆ ಲಾಹೋರ್‌ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 304 (ಎ) (ನಿರ್ಲಕ್ಷ್ಯದಿಂದ ಸಾವು) ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ತಮ್ಮ ಮಗ ವಿಪರೀತ ವಾಂತಿ ಮಾಡುತ್ತಿದ್ದರಿಂದ ಚಿಕಿತ್ಸೆಗೆ ಆತನನ್ನು ಸೆಪ್ಟೆಂಬರ್‌ 18 ರಂದು ಜಿಎಂಸಿಎಚ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ನೀಡದೆ ವಾರ್ಡ್‌ಗಳಿಗೆ ಸ್ಥಳಾಂತರಿಸುತ್ತಿದ್ದರು. ನಂತರ ವಾರ್ಡ್‌ವೊಂದರಲ್ಲಿ ಆತ ಮೃತಪಟ್ಟನು ಎಂದು ತಾಯಿ ದೂರಿನಲ್ಲಿ ಹೇಳಿದ್ದಾರೆ.

ಆಸ್ಪತ್ರೆಯ ಅಪಘಾತ ವಿಭಾಗದ ನಾಲ್ವರು ಕಿರಿಯರು ಸೇರಿ ಏಳು ವೈದ್ಯರ ನಿರ್ಲಕ್ಷ್ಯದಿಂದ ತನ್ನ ಮಗ ಸಾವನ್ನಪ್ಪಿದ್ದಾನೆ ಎಂದು ತಾಯಿ ದೂರಿದ್ದಾರೆ ಎಂದು ಅಧಿಕಾರಿ ವಿವರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು