News Karnataka Kannada
Friday, May 03 2024
ಮಹಾರಾಷ್ಟ್ರ

ಟ್ರ್ಯಾಕ್ಟರ್ ಟ್ರಕ್ ನಡುವೆ ಭೀಕರ ಅಪಘಾತ: 9 ಮಂದಿ ಸಜೀವ ದಹನ

Untitled 182
Photo Credit :

ಮಹಾರಾಷ್ಟ್ರ: ಡೀಸೆಲ್ ತುಂಬಿದ ಟ್ಯಾಂಕರ್ ಮತ್ತು ಮರವನ್ನು ಸಾಗಿಸುತ್ತಿದ್ದ ಟ್ರಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 9 ಮಂದಿ ಸಜೀವ ದಹನವಾಗಿರುವ ದುರ್ಘಟನೆ ಮಹಾರಾಷ್ಟ್ರದ ಚಂದ್ರಾಪುರ ನಗರದ ಹೊರವಲಯದಲ್ಲಿ ನಡೆದಿದೆ.

ಗುರುವಾರ ರಾತ್ರಿ 10.30ರ ಸುಮಾರಿಗೆ ಚಂದ್ರಾಪುರ-ಮುಲ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದ್ರಾಪುರ ನಗರದ ಸಮೀಪ ಅಜಯಪುರ ಸಮೀಪ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡೀಸೆಲ್ ತುಂಬಿದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಬೆಂಕಿ ಕಾಣಿಸಿಕೊಂಡು ಒಂಬತ್ತು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ ಎಂದು ಚಂದ್ರಾಪುರದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ನಂದನವರ್ ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಸುಮಾರು ಒಂದು ಗಂಟೆಯ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಅಜಯಪುರ ತಲುಪಿದ್ದು, ಕೆಲವು ಗಂಟೆಗಳ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಅಷ್ಟರಲ್ಲಾಗಲೇ 9 ಮಂದಿಯ ದೇಹ ಸುಟ್ಟುಹೋಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು