News Karnataka Kannada
Friday, May 03 2024
ಮಹಾರಾಷ್ಟ್ರ

ದೇಶದಲ್ಲಿ ಸ್ಥಗಿತಗೊಂಡಿರುವ 20 ಕಲ್ಲಿದ್ದಲು ಗಣಿಗಳು ಖಾಸಗಿಗೆ: ಪ್ರಲ್ಹಾದ ಜೋಶಿ

Lok Sabha Elections
Photo Credit :

ಮುಂಬೈ: ದೇಶದಲ್ಲಿ ಸ್ಥಗಿತಗೊಂಡಿರುವ 20 ಗಣಿಗಳನ್ನು ಆದಾಯ ಹಂಚಿಕೆ ಮಾದರಿಯ ಅಡಿಯಲ್ಲಿ ಖಾಸಗಿಯವರಿಗೆ ನೀಡುವ ಚಿಂತನೆಯನ್ನು ‘ಕೋಲ್‌ ಇಂಡಿಯಾ ಲಿಮಿಟೆಡ್‌’ ಹೊಂದಿದೆ. ಕಲ್ಲಿದ್ದಲು ಆಮದು ಪ್ರಮಾಣವನ್ನು ಕಡಿಮೆ ಮಾಡುವುದು ಇದರ ಮೂಲ ಉದ್ದೇಶ ಎಂದು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಜೋಶಿ, ‘ಸ್ಥಗಿತಗೊಂಡಿರುವ ಗಣಿಗಳಲ್ಲಿ ಹೊರತೆಗೆಯಬಹುದಾದ 38 ಕೋಟಿ ಟನ್‌ಗಳಷ್ಟು ಕಲ್ಲಿದ್ದಲು ಇದೆ. 3-4 ಕೋಟಿ ಟನ್‌ ಕಲ್ಲಿದ್ದಲನ್ನು ಸುಲಭವಾಗಿ ತೆಗೆಯಬಹುದಾಗಿದೆ’ ಎಂದು ಹೇಳಿದ್ದಾರೆ.

ಗಣಿ ಚಟುವಟಿಕೆಯನ್ನು ಮುಂದುವರಿಸುವುದರಿಂದ, ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಉಷ್ಣ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿದ್ದಲು ಪೂರೈಕೆ ಹೆಚ್ಚಿಸಲು ನೆರವಾಗಲಿದೆ ಎಂದೂ ತಿಳಿಸಿದ್ದಾರೆ.

ದೇಶವು ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆಯಿಟ್ಟಿದೆ ಎಂದಿರುವ ಜೋಶಿ, ದೂರ ಪ್ರದೇಶಗಳನ್ನೂ ವಿದ್ಯುದೀಕರಣಗೊಳಿಸಲು ಸರ್ಕಾರದ ಶ್ರಮಿಸುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ ಇಂಧನ ಆಯ್ಕೆಯಲ್ಲಿ ಬದಲಾವಣೆ, ಆಧುನಿಕ ಜೀವನಶೈಲಿಯು ವಿದ್ಯುತ್‌ನ ಬೇಡಿಕೆಯನ್ನು ಹೆಚ್ಚಿಸಿವೆ ಎಂದಿದ್ದಾರೆ.

ರೈಲ್ವೆ, ಗಣಿ ಮತ್ತು ಕಲ್ಲಿದ್ದಲು ಇಲಾಖೆಯ ರಾಜ್ಯ ಖಾತೆ ಸಚಿವ ರಾವ್‌ಸಾಹೇಬ್‌ ಪಾಟೀಲ್‌ ದಾನ್ವೆ ಅವರು, ಭಾರತವು ವಿಶ್ವದಲ್ಲೇ ಐದನೇ ಅತಿದೊಡ್ಡ ಕಲ್ಲಿದ್ದಲು ನಿಕ್ಷೇಪ ಹೊಂದಿರುವ ರಾಷ್ಟ್ರವಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಕಲ್ಲಿದ್ದಲು ಉತ್ಪಾದನೆಯನ್ನು 1.2 ಶತಕೋಟಿ (1,200 ಕೋಟಿ) ಮೆಟ್ರಿಕ್‌ ಟನ್‌ಗಳಿಗೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು