ನಾಗ್ಪುರ : 23 ವರ್ಷದ ವ್ಯಕ್ತಿಯೊಬ್ಬ ತನ್ನೊಂದಿಗೆ ವೈಮನಸ್ಯ ಹೊಂದಿದ್ದ ಪ್ರೇಯಸಿಯನ್ನು ನೇಣು ಹಾಕಲು ಯತ್ನಿಸಿರುವುದಾಗಿ ಸಿಟಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕೊರಾಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆದೇಶ್ ದುರ್ಗಾದಾಸ್ ತಿರ್ಪುಡೆ (23) ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳತನದ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದ ನಂತರ ತಿರ್ಪುಡೆಯೊಂದಿಗೆ ಆತನ ಪ್ರೇಯಸಿ ಮಾತು ನಿಲ್ಲಿಸಿದ್ದಳು. ಇದರಿಂದ ಆತ ಕೋಪಗೊಂಡಿದ್ದ. ‘ಶುಕ್ರವಾರ ಆಕೆಯ ಮನೆಗೆ ನುಗ್ಗಿದ ಆತ, ಆಕೆಯ ಕೆನ್ನೆಗೆ ಬಾರಿಸಿದ್ದಾನೆ ಮತ್ತು ದುಪ್ಪಟ್ಟಾದಿಂದ ಸೀಲಿಂಗ್ ಫ್ಯಾನಿಗೆ ನೇಣು ಬಿಗಿಯಲು ಯತ್ನಿಸಿದ್ದಾರೆ. ಅದೃಷ್ಟವಶಾತ್, ಯುವತಿಯ ಸಂಬಂಧಿ ಸ್ಥಳಕ್ಕೆ ಭೇಟಿ ನೀಡಿದಾಗ ಅವಘಡ ತಪ್ಪಿದೆ. ಈ ವೇಳೆ ತಿರ್ಪುಡೆ ಅಲ್ಲಿಂದ ಪರಾರಿಯಾಗಿದ್ದಾನೆ. ಮುಂದಿನ ತನಿಖೆ ಕೈಗೊಳ್ಳಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…
ಶನಿವಾರ ತಡರಾತ್ರಿ ನಡೆದ ಐಪಿಎಲ್ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್…
ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…
ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…