News Karnataka Kannada
Monday, April 29 2024
ಮಹಾರಾಷ್ಟ್ರ

ನೀಲಿ ಚಿತ್ರ ಪ್ರಕರಣ ; ನಿರ್ಮಾಪಕ ರಾಜ್‌ಕುಂದ್ರಾ ಅರ್ಜಿ ತಿರಸ್ಕಾರ

Raj Kundra 26 7 21
Photo Credit :

ಮುಂಬೈ: ನೀಲಿ ಚಿತ್ರಗಳನ್ನು ನಿರ್ಮಾಣ ಮಾಡಿ ವಿತರಣೆ ಮಾಡುತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನವನ್ನು ಪ್ರಶ್ನಿಸಿ ಉದ್ಯಮಿ ಮತ್ತು ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಕುಂದ್ರಾ ಸಹಚರ ರಿಯಾನ್ ಥಾರ್ಪ್ ಅವರ ಅರ್ಜಿಯನ್ನೂ ಸಹ ನ್ಯಾಯಾಲಯ ತಿರಸ್ಕರಿಸಿದೆ.
ಈ ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಗಡ್ಕರಿ ಅವರಿದ್ದ ಏಕ ಸದಸ್ಯ ಪೀಠವು ಕುಂದಾ ಮತ್ತು ಥಾರ್ಪ್ ಅರ್ಜಿಗಳನ್ನು ತಿರಸ್ಕರಿಸಿದೆ. ಮಹಾನಗರ ದಂಡಾಧಿಕಾರಿಗಳ ಆದೇಶದಂತೆ ಇವರಿಬ್ಬರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ನ್ಯಾಯಾಂಗ ಬಂಧನದಲ್ಲಿ ಇರಿಸಿರುವುದು ಕಾನೂನು ಮಿತಿಯಲ್ಲಿಯೇ ಇದೆ. ಹೀಗಾಗಿ ಇದರಲ್ಲಿ ಮಧ್ಯಸ್ಥಿಕೆ ವಹಿಸುವ ಅಗತ್ಯವಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ. ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ. ಹೀಗಾಗಿ ಕೂಡಲೇ ತಮ್ಮನ್ನು ಬಿಡುಗಡೆ ಮಾಡಬೇಕು ಮತ್ತು ಬಂಧನಕ್ಕೆ ಸಂಬಂಧಿಸಿದ ದಂಡಾಧಿಕಾರಿಯವರ ಆದೇಶವನ್ನು ರದ್ದುಗೊಳಿಸಬೇಕೆಂದು ಕುಂದ್ರಾ ಮತ್ತು ಥಾರ್ಪ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು