ಪುಣೆ : 16 ತಿಂಗಳ ಹಸುಗೂಸಿನ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಲ್ಲದೇ, ಹತ್ಯೆ ಮಾಡಿ ಮೃತದೇಹದೊಂದಿಗೆ ಹೋಗುತ್ತಿದ್ದ ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಆರೋಪಿತರು ರೈಲಿನ ಮೂಲಕ ತೆಲಂಗಾಣದ ಸಿಕಂದರಾಬಾದ್ ನಗರದಿಂದ ರಾಜ್ ಕೋಟ್ ಗೆ ತೆರಳುತ್ತಿದ್ದರು. ತಮ್ಮೊಂದಿಗೆ ಈ ಕಂದಮ್ಮನ ಮೃತ ದೇಹ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿಯೇ ಪೊಲೀಸರು ಬಂಧಿಸಿದ್ದಾರೆ.
26 ವರ್ಷದ ಪಾಪಿ ತಂದೆ ಈ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಆ ನಂತರ ಕತ್ತು ಹಿಸುಕಿ ಮಗುವನ್ನು ಕೊಲೆ ಮಾಡಿದ್ದಾನೆ. ಇದಕ್ಕೆ ಆತನ ಪತ್ನಿ ಕೂಡ ಸಹಕಾರ ನೀಡಿದ್ದಾಳೆ ಎನ್ನಲಾಗಿತ್ತು. ನಂತರ ತಮ್ಮ ಊರಿನಲ್ಲಿ ಮಗುವಿನ ಅಂತ್ಯ ಸಂಸ್ಕಾರ ನಡೆಸಲು ರಾಜ್ ಕೋಟ್ ರೈಲು ಹತ್ತಿದ್ದರು.
ಮಗು ಯಾವುದೇ ಪ್ರತಿಕ್ರಿಯೆ ಹಾಗೂ ಚಲನವಲನ ಮಾಡದೆ ಇರುವುದಕ್ಕೆ ಅನುಮಾನಗೊಂಡು ರೈಲಿನಲ್ಲಿದ್ದ ಇನ್ನಿತರ ಪ್ರಯಾಣಿಕರು ಈ ಕುರಿತು ರೈಲ್ವೆ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ಆ ನಂತರ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಸೊಲ್ಲಾಪುರದಲ್ಲಿ ದಂಪತಿಯನ್ನು ರೈಲಿನಿಂದ ಕೆಳಗೆ ಇಳಿಸಿ ತಪಾಸಣೆ ನಡೆಸಿದಾಗ ಈ ಸಂಗತಿ ಬಯಲಿಗೆ ಬಂದಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಬಂಧಿಸಿರುವ ಪೊಲೀಸರು, ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…