ಮುಂಬೈ: ಯಾವ ವಿದೇಶಿ ಸರ್ಕಾರಗಳು ನಮ್ಮ ದೇಶದ ರಾಜಕಾರಣಿಗಳು, ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಪತ್ರಕರ್ತರ ಮೇಲೆ ಗೂಢಚರ್ಯೆ ನಡೆಸಿವೆ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಎನ್ಸಿಪಿ ವಕ್ತಾರ ಮತ್ತು ಸಚಿವ ನವಾಬ್ ಮಲಿಕ್ ಮಂಗಳವಾರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಲಿಕ್, ಪೆಗಾಸಸ್ ಗೂಢಚರ್ಯೆಗೆ ಕುತಂತ್ರಾಂಶಕ್ಕೆ ಸಂಬಂಧಿಸಿದಂತೆ ಇಸ್ರೇಲಿ ಕಂಪನಿ ಎನ್ಎಸ್ಒ ಸಮೂಹದ ಜತೆ ಯಾವುದೇ ವ್ಯವಹಾರ ನಡೆದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಹಾಗಾದರೆ, ಕೇಂದ್ರ ಸರ್ಕಾರ ತಕ್ಷಣ ತನಿಖೆಗೆ ಆದೇಶಿಸಿ, ಯಾವ ವಿದೇಶಿ ಸರ್ಕಾರ ಕೆಲಸ ಮಾಡಿದೆ ಎಂದು ಪತ್ತೆ ಮಾಡಬೇಕು‘ ಎಂದು ಒತ್ತಾಯಿಸಿದ್ದಾರೆ.
ಈ ಕೆಲಸ ಸರ್ಕಾರದಲ್ಲ ಎಂದಾದ ಮೇಲೆ, ಇದೊಂದು ಗಂಭೀರ ಪ್ರಕರಣವಾಗುತ್ತದೆ. ತ್ವರಿತಗತಿಯಲ್ಲಿ ತನಿಖೆ ನಡೆಸಿ, ಪ್ರಕರಣಕ್ಕೆ ಕಾರಣರಾದವರನ್ನು ಪತ್ತೆ ಮಾಡಬೇಕು ಎಂದು ಮಲಿಕ್ ಆಗ್ರಹಿಸಿದ್ದಾರೆ.
ಪೆಗಾಸಸ್ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದ ಎನ್ಸಿಪಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.