ಮಹಾರಾಷ್ಟ್ರ: ಥಾಣೆ ಜಿಲ್ಲೆಯ ಭಾಯಂದರ್ ಟೌನ್ಶಿಪ್ನಲ್ಲಿ ಬೆಳಗಿನ ಉಪಾಹಾರದಲ್ಲಿ ಉಪ್ಪಿನ ಪ್ರಮಾಣ ಜಾಸ್ತಿಯಾಗಿದೆ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದಿರುವ ಘಟನೆ ನಡೆದಿದೆ.
46 ವರ್ಷದ ನಿಲೇಶ್ ಘಾಘ್ ಆರೋಪಿ ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಈತ ಸೇವಿಸುತ್ತಿದ್ದ ಕಿಚಡಿಯಲ್ಲಿ ಉಪ್ಪಿನ ಪ್ರಮಾಣ ಜಾಸ್ತಿಯಾಗಿದೆ ಎಂದು ಕೋಪಗೊಂಡಿದ್ದ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳ ತಾರಕಕ್ಕೇರಿದೆ.
ಈ ವೇಳೆ ಪತ್ನಿ ನಿರ್ಮಲಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನೂ, ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇಂತದ್ದೇ ಒಂದು ಘಟನೆ ಹಕಳೆದ ಎರಡ್ಮೂರು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು. ಬೆಳಗಿನ ಚಹಾದೊಂದಿಗೆ ಉಪಹಾರ ನೀಡಲಿಲ್ಲ ಎಂಬ ಕಾರಣಕ್ಕೆ ಮಾವ ಸೊಸೆಯ ಮೇಲೆ ಗುಂಡುಹಾರಿಸಿ ಕೊಂದಿದ್ದನು. ಈ ಘಟನೆ ಮಾಸುವ ಮುನ್ನವೇ, ಮತ್ತೊಂದು ಇಂತದ್ದೇ ಘಟನೆ ನಡೆದಿದೆ.