ಮಹಾರಾಷ್ಟ್ರ : ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗಗಳಲ್ಲಿ ಹೆಚ್ಚು ತೊಂದರೆಯಾಗಿದೆ.
ಈ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಅವರು ಸಭೆ ನಡೆಸಿದ್ದು, ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.
ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಮಳೆ ಹಾಗೂ ಪ್ರವಾಹ ಕಾರಣದಿಂದ ಆಗಿರುವ ಅವಘಡಗಳಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದರೆ, ರಾಜ್ಯದ ವಿವಿಧ ಭಾಗಗಳಲ್ಲಿ ತೊಂದರೆಗೆ ಸಿಲುಕಿದ್ದ 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.