ಔರಂಗಾಬಾದ್: ಕೋವಿಡ್-19 ವಿರುದ್ಧ ಕನಿಷ್ಠ ಒಂದು ಡೋಸ್ ಲಸಿಕೆ ತೆಗೆದುಕೊಂಡ ನಾಗರಿಕರಿಗೆ ಮಾತ್ರ ದಿನಸಿ ಮತ್ತು ಇಂಧನವನ್ನು ಪೂರೈಸಲು ಮಹಾರಾಷ್ಟ್ರದ ಜಿಲ್ಲಾಡಳಿತವು ಪಡಿತರ ಅಂಗಡಿಗಳು, ಗ್ಯಾಸ್ ಏಜೆನ್ಸಿಗಳು ಮತ್ತು ಪೆಟ್ರೋಲ್ ಪಂಪ್ಗಳಿಗೆ ಸೂಚಿಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಶೇ.55ರಷ್ಟು ಅರ್ಹರಿಗೆ ಚುಚ್ಚುಮದ್ದು ನೀಡಲಾಗಿದ್ದು, ರಾಜ್ಯದಲ್ಲಿ ಶೇ.74ರಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಹೊರಡಿಸಿದ ಆದೇಶದಲ್ಲಿ ಔರಂಗಾಬಾದ್ ಜಿಲ್ಲಾಧಿಕಾರಿ ಸುನೀಲ್ ಚವಾಣ್ ಅವರು ಗ್ರಾಹಕರ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪರಿಶೀಲಿಸುವಂತೆ ನ್ಯಾಯಬೆಲೆ ಅಂಗಡಿಗಳು, ಗ್ಯಾಸ್ ಏಜೆನ್ಸಿಗಳು ಮತ್ತು ಪೆಟ್ರೋಲ್ ಪಂಪ್ಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದೇಶವನ್ನು ಪಾಲಿಸದಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಆಡಳಿತ ಕ್ರಮ ಕೈಗೊಳ್ಳಲಿದೆ ಎನ್ನಲಾಗಿದೆ.