ಮಹಾರಾಷ್ಟ್ರ : ಸಹೋದರಿಯರಿಬ್ಬರು ಓಡುತ್ತಿರುವ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉರಳ್ ಪೊಲೀಸ್ ಠಾಣಾ ವ್ಯಾಪ್ತಿಯ ಮನಾರ್ಖೇಡ್ ರೈಲು ನಿಲ್ದಾಣದಲ್ಲಿ ನಡೆದಿದೆ. ಇಬ್ಬರೂ ಸಹೋದರಿಯರು ಛತ್ತೀಸ್ಗಢ ಮೂಲದವರು ಎಂದು ತಿಳಿದುಬಂದಿದೆ. ಮುಂಬೈ-ಕೋಲ್ಕತ್ತಾ ಮಾರ್ಗದ ರೈಲಿನಿಂದ ಹಾರಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೇಬಿ ರಜಪೂತ್ ಮತ್ತು ಪೂಜಾ ಗಿರಿ ಮನೆಯಲ್ಲಿ ಜಗಳವಾಡಿಕೊಂಡು ಬಂದಿದ್ದರು ಎಂದು ಪ್ರಾಥಮಿಕ ತನಿಖೆಯ ಮೂಲಕ ತಿಳಿದು ಬಂದಿದೆ. ಬುಧವಾರ ರಾತ್ರಿ 9.30ರ ಸುಮಾರಿಗೆ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಬ್ಬರೂ ಸಮವಸ್ತ್ರದಲ್ಲಿದ್ದದ್ದು ಗೊತ್ತಾಗಿದೆ. ಸ್ಥಳಕ್ಕೆ ಅಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಬೇಬಿ ರಜಪೂತ್ ಮತ್ತು ಪೂಜಾ ಗಿರಿ ಪರಸ್ಪರ ಸೋದರ ಸಂಬಂಧಿಗಳಾಗಿದ್ದು, ನಾಲ್ಕು ದಿನಗಳ ಹಿಂದೆ ಇಬ್ಬರು ಬಾಲಕಿಯರು ಐಟಿಐಗೆ ಹೋಗುವುದಾಗಿ ಹೇಳಿ ಮನೆ ಬಿಟ್ಟಿದ್ದರು ಎಂದು ತಿಳಿದು ಬಂದಿದೆ. ಆದರೆ ಅವರಿಬ್ಬರೂ ಮನೆಗೆ ಹಿಂದಿರುಗಲಿಲ್ಲ. ಅವರ ಕುಟುಂಬ ಚಾಪಾ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಮುಂಬೈ-ಕೋಲ್ಕತ್ತಾ ರೈಲಿನಲ್ಲಿ ಪೂಜಾ ಮತ್ತು ಬೇಬಿ ಪ್ರಯಾಣಿಸುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ರೈಲಿನಿಂದ ಜಿಗಿದಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…
ಯಮುನೋತ್ರಿ, ಗಂಗೋತ್ರಿ, ಕೇದರ್ನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…
ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್ ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.
ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…