ತಿರುವನಂತಪುರಂ: ಕೊರೊನಾವೈರಸ್ ಹೊಸ ರೂಪಾಂತರ ಓಮಿಕ್ರಾನ್ ಕೇರಳಕ್ಕೂ ಕಾಲಿಟ್ಟಿದೆ. ಭಾನುವಾರ ಯುನೈಟೆಡ್ ಕಿಂಗ್ಡಂನಿಂದ ಕೊಚ್ಚಿಗೆ ಆಗಮಿಸಿದ ವ್ಯಕ್ತಿಯಲ್ಲಿ ಹೊಸ ರೂಪಾಂತರ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.
ಇತ್ತ ಇನ್ನೊಂದು ಪ್ರಕರಣದಲ್ಲಿ ಮುಂಬೈನಲ್ಲಿ ನೆಗೆಟಿವ್ ವರದಿ ಮಾಡಿದ ವ್ಯಕ್ತಿಯು ಆಂಧ್ರ ಪ್ರದೇಶಕ್ಕೆ ಬರುತ್ತಿದ್ದಂತೆ ಸೋಂಕು ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.ಅವರ ಪತ್ನಿ ಮತ್ತು ತಾಯಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಎಲ್ಲರನ್ನೂ ಐಸೋಲೇಷನ್ ವಾರ್ಡ್ಗೆ ಸ್ಥಳಾಂತರಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ.
“ಸೋಂಕಿತ ವ್ಯಕ್ತಿಯ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಹೆಚ್ಚಿನ ಅಪಾಯವಿರುವ ಬಗ್ಗೆ ತಿಳಿಸಲಾಗಿದ್ದು, ಯಾವುದೇ ರೀತಿ ಭಯಪಡುವ ಅಗತ್ಯವಿಲ್ಲ, ಅವರ ಸ್ಥಿತಿ ಸ್ಥಿರವಾಗಿದೆ.