News Karnataka Kannada
Sunday, May 05 2024
ಮಹಾರಾಷ್ಟ್ರ

ಮುಂಬೈ: ಸ್ನೇಹಿತೆ ಕರೆ ಸ್ವೀಕರಿಸದ ಕಾರಣ ಯುವಕ ಆತ್ಮಹತ್ಯೆ

Suicide Hyderabad
Photo Credit :

ಮುಂಬೈ : ಮುಂಬೈನ ಡಿಯೋನಾರ್ ಪ್ರದೇಶದಲ್ಲಿ ತನ್ನ ಸ್ನೇಹಿತೆ ಕರೆ ಸ್ವೀಕರಿಸದ ಕಾರಣ 24 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನ ಮಾನವ್ ಲಾಲ್ವಾನಿ ಎಂದು ಗುರುತಿಸಲಾಗಿದೆ.

ಮೃತ ಯುವಕ ತಡರಾತ್ರಿವರೆಗೂ  ಆತನ ಸ್ನೇಹಿತ – ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಟ್ರೋಂಬೇ ಪೊಲೀಸ್ ಠಾಣೆ ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಾರ್ಟಿ ಮುಗಿಸಿ ಮನೆಗೆ ಬಂದ ಯುವಕ, ತನ್ನ ಸ್ನೇಹಿತೆಗೆ ಕರೆ ಮಾಡಿದ್ದಾನೆ. ಆದ್ರೆ, ಯುವತಿ ಆತನ ಕರೆಯನ್ನ ಸ್ವೀಕರಿಸಿಲ್ಲ. ಪಟ್ಟು ಬಿಡದ ಯುವಕ ಮತ್ತೆ ಮತ್ತೆ ಕರೆ ಮಾಡಿದ್ದಾನೆ. ಆದ್ರೆ, ಯುವತಿ ಕರೆಗೆ ಪ್ರತಿಕ್ರಿಯಿಸದ ಕಾರಣ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ’ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.

ಮಂಗಳವಾರ ಬೆಳಿಗ್ಗೆ ಯುವಕ ಟೆರೇಸ್ʼನಲ್ಲಿ ನೇತಾಡುತ್ತಿರುವುದನ್ನ ಅವನ ಪೋಷಕರು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಸಂತ್ರಸ್ತನ ದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನು ಹೆಚ್ಚಿನ ತನಿಖೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಿಸಿ ಯುವತಿಯ ಹೇಳಿಕೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು