ಮುಂಬೈ, : ಮಹಾರಾಷ್ಟ್ರದ ಮಾಜಿ ಗೃಹ ಮಂತ್ರಿ ಅನಿಲ್ ದೇಶ್ ಮುಖ್ ಅವರು ಪೋಲೀಸರು ತಿಂಗಳಿಗೆ ನೂರು ಕೋಟಿ ರೂಪಾಯಿ ಸಂಗ್ರಹಿಸಿ ಕೊಡಬೇಕೆಂದು ಬೇಡಿಕೆ ಯಿಟ್ಟಿದ್ದ ವಿಚಾರಕ್ಕೆ ಸಂಬಂದಿಸಿದಂತೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ವ್ಯಕ್ತಿಯೊಬ್ಬರನ್ನು ಬೆದರಿಸಿ ಬಲವಂತವಾಗಿ ಲಂಚ ಪಡೆಯುತ್ತಿದ್ದ ಡಿವೈಎಸ್ಪಿ ಮತ್ತು ಅವರ ಸಹೋದ್ಯೋಗಿಯನ್ನು ಮಹಾರಾಷ್ಟ್ರ ಭಷ್ಟ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಪರ್ಭಣಿಯ ಸೆಲುವಿನ ಉಪವಿಭಾಗ ಪೊಲೀಸ್ ಅಧಿಕಾರಿಯಾಗಿರುವ ಡಿವೈಎಸ್ಪಿ ರಾಜೇಂದ್ರ ಪಾಲ್ (55) ಮತ್ತವರ ಸಹೋದ್ಯೋಗಿಯನ್ನು ಬಂಧಿಸಲಾಗಿದೆ.
ಕಳೆದ ವರ್ಷ ಮೇ ತಿಂಗಳಿನಲ್ಲಿ ಅಪಘಾತವೊಂದು ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಮೃತಪಟ್ಟ ವ್ಯಕ್ತಿಯ ಪತ್ನಿ ಜೊತೆ ದೂರುದಾರ ಸಂಭಾಷಣೆ ನಡೆಸಿರುವ ಆಡಿಯೋ ಕ್ಲಿಪ್ ಇತ್ತೀಚೆಗೆ ಬೆಳಕಿಗೆ ಬಂಧಿತ್ತು. ಅದನ್ನು ಮುಂದಿಟ್ಟುಕೊಂಡು ಡಿವೈಎಸ್ಪಿ ಪಾಲ್ ದೂರುದಾರರನ್ನು ಸಂಪರ್ಕಿಸಿದರು. ಆಡಿಯೋ ಕ್ಲಿಪ್ ಆಧರಿಸಿ ಮುಂದಿನ ತನಿಖೆ ನಡೆದಿರಲು ಮತ್ತು ಕ್ರಮ ಕೈಗೊಳ್ಳದಿರಲು ಎರಡು ಕೋಟಿ ಹಣ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದರು.
ಪದೇ ಪದೇ ಕರೆ ಮಾಡಿ ಬೆದರಿಕೆ ಹಾಕಿದ್ದರು. ನನ್ನ ಬಳಿ ಅಷ್ಟ ಹಣ ಇಲ್ಲ ಎಂದು ದೂರುದಾರರು ಹೇಳಿದಾಗ ಚೌಕಾಸಿ ನಡೆದು ಒಂದುವರೆ ಕೋಟಿಗೆ ಒಪ್ಪಂದವಾಗಿತ್ತು. ಅದರ ಮೊದಲ ಕಂತಿನ 10 ಲಕ್ಷ ರೂಪಾಯಿಯನ್ನು ಡಿವೈಎಸ್ಪಿ ತಮ್ಮ ಸಹೋದ್ಯೋಗಿ ಮೂಲಕ ಪಡೆಯುವಾಗ ಎಸಿಬಿ ಅಧಿಕಾರಿಗಳು ಬಲೆ ಬೀಸಿ ಸ್ಥಳದಲ್ಲೇ ಹಿಡಿದು ಹಾಕಿದ್ದಾರೆ. ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.