ಮುಂಬೈ ;ಮುಖ್ಯಮಂತ್ರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಕಾನೂನಿನ ಸಂಕಷ್ಟಕ್ಕೆ ಸಿಲುಕಿರುವ ಕೇಂದ್ರ ಸಚಿವ ನಾರಾಯಣರಾಣೆ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿಲ್ಲ. ನಾರಾಯಣರಾಣೆ ಅವರಿಗೆ ಅನಾರೋಗ್ಯ ಇರುವ ಕಾರಣ ಅವರು ವಿಚಾರಣೆಗೆ ಹಾಜರಾಗಿಲ್ಲ ಎಂದು ಅವರ ಪರ ವಕೀಲ ಸಂದೇಶ್ ಚಿಕ್ಣೆ ಪೊಲೀಸರಿಗೆ ತಿಳಿಸಿದ್ದಾರೆ.
ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವದ ಆಚರಣೆಯ ಬಗ್ಗೆ ಮುಖ್ಯಮಂತ್ರಿ ಉದ್ದವ್ಠಾಕ್ರೆ ಹೇಳಿಕೆ ನೀಡಿದ್ದರು. ಅದನ್ನು ಖಂಡಿಸುವ ಭರದಲ್ಲಿ ನಾರಾಯಣರಾಣೆ ಮುಖ್ಯಮಂತ್ರಿಗೆ ಸ್ವಾತಂತ್ರ್ಯ ಬಂದ ವರ್ಷವೇ ಗೊತ್ತಿಲ್ಲ. ಹಗುರವಾಗಿ ಮಾತನಾಡಿರುವ ಅವರ ಕೆನ್ನೆಗೆ ಭಾರಿಸುತ್ತಿದ್ದೆ ಎಂದು ಹೇಳಿದ್ದರು. ಇದರ ವಿರುದ್ಧ ಶಿವಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದಾದ್ಯಂತದ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದರು. ವಿವಿಧ ಸೆಕ್ಸನ್ಗಳಡಿ ಪ್ರಕರಣ ದಾಖಲಾಗಿದ್ದವು. ಕಳೆದ ಮಂಗಳವಾರ ರತ್ನಗಿರಿ ಜಿಲ್ಲೆಯ ಪೊಲೀಸರು ರಾಣೆ ಅವರನ್ನು ಬಂಧಿಸಿದ್ದರು. ಸ್ಥಳೀಯ ನ್ಯಾಯಾಲಯದ ಜಾಮೀನಿನ ಮೇಳೆ ಸಂಜೆ ವೇಳೆಗೆ ಬಿಡುಗಡೆ ಕೂಡ ಮಾಡಲಾಗಿತ್ತು . ಮುಂದುವರೆದ ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕೆಂದು ನೋಟಿಸ್ ನೀಡಲಾಗಿತ್ತು. ಆದರೆ, ಇಂದು ನಾರಾಯಣರಾಣೆ ವಿಚಾರಣೆಗೆ ಹಾಜರಾಗಿಲ್ಲ.
ವಿಚಾರಣೆಗೆ ಹಾಜರಾಗದ ಕೇಂದ್ರ ಸಚಿವ ನಾರಾಯಣರಾಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.