News Karnataka Kannada
Monday, April 29 2024
ಮಹಾರಾಷ್ಟ್ರ

ವಿಠ್ಠಲನ ದರ್ಶನಕ್ಕೆ ತೆರಳಿದ 7 ಮಂದಿ ಭಕ್ತರು ಮಸಣಕ್ಕೆ, 40ಕ್ಕೂ ಹೆಚ್ಚು ಜನರಿಗೆ ಗಾಯ

Accident
Photo Credit : News Kannada

ಮಹಾರಾಷ್ಟ್ರ: ಸೊಲ್ಲಾಪುರ-ಪುಣೆ ಹೆದ್ದಾರಿಯ ಲಂಬೋಟಿ ಬಳಿ ದಿಂಡಿಯಿಂದ ಭಕ್ತರು ಪಂಢರಾಪುರಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 35-40 ಮಂದಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರೆಲ್ಲರೂ ತುಳಜಾಪುರ ತಾಲೂಕಿನ ಕದಮವಾಡಿಯವರು ಎಂದು ತಿಳಿದು ಬಂದಿದೆ. ಈ ಎಲ್ಲ ಭಕ್ತರು ಏಕಾದಶಿ ನಿಮಿತ್ತ ಟ್ರ್ಯಾಕ್ಟರ್‌ನಲ್ಲಿ ಪಂಢರಾಪುರಕ್ಕೆ ತೆರಳಿದ್ದರು.

ಕಳೆದ ರಾತ್ರಿ ಕೊಂಡಿ-ಕೆಗಾಂವ್ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸೊಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೊಲ್ಲಾಪುರದಿಂದ ಮೊಹೋಲ್ ಮೂಲಕ ಪಂಢರಪುರಕ್ಕೆ ತೆರಳುತ್ತಿದ್ದಾಗ ಕೊಂಡಿ ಮತ್ತು ಕೆಗಾಂವ್ ನಡುವೆ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಲಾರಿ (ಎಂಎಚ್ 12 ಟಿವಿ 7348) ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಕ್ರಮ ಕೈಗೊಂಡಿದ್ದು ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು