ಮಹಾರಾಷ್ಟ್ರ: ಶವಸಂಸ್ಕಾರದ ಪ್ರಕ್ರಿಯೆ ವೇಳೆ ಚಿತೆಗೆ ಪೆಟ್ರೋಲ್ ಹಾಕಲಾಗುತ್ತಿತ್ತು. ಈ ವೇಳೆ ಬೆಂಕಿ ತಗುಲಿ ಪೆಟ್ರೋಲ್ ಕ್ಯಾನ್ ಸ್ಫೋಟಗೊಂಡು 11 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮುಲಾ-ಮುತಾ ನದಿಯ ದಡದಲ್ಲಿರುವ ಕೈಲಾಶ್ ಸ್ಮಶಾನದಲ್ಲಿ ಶನಿವಾರ ಈ ಘಟನೆ ನಡೆದಿದೆ.
ಮಾಹಿತಿ ಪ್ರಕಾರ, ಶವಸಂಸ್ಕಾರದ ವೇಳೆ ಪೆಟ್ರೋಲ್ ಕ್ಯಾನ್ ಸ್ಫೋಟಗೊಂಡು 11 ಮಂದಿ ಗಾಯಗೊಂಡಿದ್ದು, ಅದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಸೂನ್ ಜನರಲ್ ಆಸ್ಪತ್ರೆ ಮತ್ತು ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೈಲಾಶ್ ಸ್ಮಶಾನದಲ್ಲಿ ಈ ಘಟನೆ ನಡೆದಿದೆ ಎಂದು ಉಪ ಪೊಲೀಸ್ ಆಯುಕ್ತ ಸಾಗರ್ ಪಾಟೀಲ್ ತಿಳಿಸಿದ್ದಾರೆ.
ಘಟನೆ ನಡೆದಾಗ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ದೀಪಕ್ ಕಾಂಬಳೆ ಅವರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಈ ವೇಳೆ ಇಲ್ಲಿ ಸುಮಾರು ಕುಟುಂಬ ಸದಸ್ಯರು ಸೇರಿದಂತೆ ಸುಮಾರು 80 ಜನರು ಸ್ಮಶಾನದಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.
ಈ ಕುರಿತು ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.