News Karnataka Kannada
Monday, April 29 2024
ಮಹಾರಾಷ್ಟ್ರ

ಶವಸಂಸ್ಕಾರದ ವೇಳೆ ಪೆಟ್ರೋಲ್ ಕ್ಯಾನ್ ಸ್ಫೋಟ : 11 ಮಂದಿಗೆ ಗಾಯ

Untitled 182
Photo Credit :

ಮಹಾರಾಷ್ಟ್ರ: ಶವಸಂಸ್ಕಾರದ ಪ್ರಕ್ರಿಯೆ ವೇಳೆ ಚಿತೆಗೆ ಪೆಟ್ರೋಲ್‌ ಹಾಕಲಾಗುತ್ತಿತ್ತು. ಈ ವೇಳೆ ಬೆಂಕಿ ತಗುಲಿ ಪೆಟ್ರೋಲ್‌ ಕ್ಯಾನ್ ಸ್ಫೋಟಗೊಂಡು 11 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮುಲಾ-ಮುತಾ ನದಿಯ ದಡದಲ್ಲಿರುವ ಕೈಲಾಶ್ ಸ್ಮಶಾನದಲ್ಲಿ ಶನಿವಾರ ಈ ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ಶವಸಂಸ್ಕಾರದ ವೇಳೆ ಪೆಟ್ರೋಲ್‌ ಕ್ಯಾನ್ ಸ್ಫೋಟಗೊಂಡು 11 ಮಂದಿ ಗಾಯಗೊಂಡಿದ್ದು, ಅದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಸೂನ್ ಜನರಲ್ ಆಸ್ಪತ್ರೆ ಮತ್ತು ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೈಲಾಶ್ ಸ್ಮಶಾನದಲ್ಲಿ ಈ ಘಟನೆ ನಡೆದಿದೆ ಎಂದು ಉಪ ಪೊಲೀಸ್ ಆಯುಕ್ತ ಸಾಗರ್ ಪಾಟೀಲ್ ತಿಳಿಸಿದ್ದಾರೆ.

ಘಟನೆ ನಡೆದಾಗ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ದೀಪಕ್ ಕಾಂಬಳೆ ಅವರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಈ ವೇಳೆ ಇಲ್ಲಿ ಸುಮಾರು ಕುಟುಂಬ ಸದಸ್ಯರು ಸೇರಿದಂತೆ ಸುಮಾರು 80 ಜನರು ಸ್ಮಶಾನದಲ್ಲಿ ಉಪಸ್ಥಿತರಿದ್ದರು ಎನ್ನಲಾಗಿದೆ.

ಈ ಕುರಿತು ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು