ಮುಂಬೈ: ಇಂದು ನಿಧನರಾದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.
ಲತಾ ಮಂಗೇಶ್ಕರ್ ಅವರ ಅಗಲಿಕೆ ಒಂದು ವೈಭವದ ಯುಗದ ಅಂತ್ಯವನ್ನು ಸೂಚಿಸುತ್ತದೆ ಎಂದು ಠಾಕ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲತಾ ಅವರ ಮಧುರ ಧ್ವನಿ ಅಮರ.
ಅವರ ನಿಧನ ವಾರ್ತೆ ಕೇಳಿ ಪ್ರತಿಯೊಬ್ಬರೂ ದುಃಖಿತರಾಗಿದ್ದಾರೆ ಎಂದು ಠಾಕ್ರೆ ನುಡಿದಿದ್ದಾರೆ. ಅವರು ಜೀವಂತವಾಗಿಯೇ ಉಳಿಯಲಿದ್ದಾರೆ ಎಂದು ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.