ಮಹಾರಾಷ್ಟ್ರ : ಅಕ್ರಮ ಹಣವರ್ಗಾವಣೆಯ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಸಚಿವ ನವಾಬ್ ಮಲ್ಲಿಕ್ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.
ಜಾಮೀನು ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ “ತನಿಖೆಯು ಇನ್ನೂ ಸರಿಯಾಗಿ ಪೂರ್ತಿಯಾಗಿಲ್ಲ, ಈ ಸಂದರ್ಭದಲ್ಲಿ ತನಿಖೆಯ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ. ನೀವು ಸಮರ್ಥವಾಗಿ ನ್ಯಾಯಾಲಯದಲ್ಲಿ ಪ್ರಕರಣವನ್ನು ಎದುರಿಸಿ” ಎಂದು ಹೇಳಿದೆ.
1993 ರ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಗೆ ಅಕ್ರಮವಾಗಿ ಹಣ ವರ್ಗಾಯಿಸಿರುವ ಆರೋಪದ ಮೇಲೆ ಎನ್ಸಿಪಿ ಸಚಿವ ನವಾಬ್ ಮಲ್ಲಿಕ್ ರನ್ನು ತನಿಖಾಧಿರಿಗಳು ಬಂಧಿಸಿದ್ದರು. ಈ ಕುರಿತು ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಗೆ ಮಲ್ಲಿಕ್ ಅರ್ಜಿ ಸಲ್ಲಿಸಿದ್ದರು. ಆದರೆ ಬಾಂಬೆ ಹೈಕೋರ್ಟ್ ಇದನ್ನು ನಿರಾಕರಿಸಿತ್ತು.
ನವಾಬ್ ಬಂಧನದ ಕುರಿತು ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ-ಎನ್ಸಿಪಿ ಮೈತ್ರಿ ಸರ್ಕಾರ ʼಇದು ರಾಜಕೀಯ ಷಡ್ಯಂತ್ರʼ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…